ಮಹಾರಾಷ್ಟ್ರದ, ಕಿಚ್ಚಿಗೆ ಬೆಂಕಿಗಾಹುತಿಯಾದ, ನಮ್ಮ ಬಸ್‌…!!

ಬೆಳಗಾವಿ-ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿಗಾಹುತಿಯಾದ ಘಟನೆ,ಪಕ್ಕದ ಮಹಾರಾಷ್ಟ್ರದಲ್ಲಿ ನಡೆದಿದೆ.

ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಹಂಚಿರುವ ದುಷ್ಕರ್ಮಿಗಳು,ಮಹಾರಾಷ್ಟ್ರದ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಗೆ ಬೆಂಕಿ ಹಚ್ಚಿದ್ದಾರೆ.ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ.

ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು,ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆದಿದ್ದು,ಜಾಲ್ನಾ ಜಿಲ್ಲೆಯ ಶಹಾಗಡ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಈಗ ಹಿಂಸಾಚಾರದ ಸ್ವರೂಪ ಪಡೆದಿದೆ.

ಇಂದು ಪೊಲೀಸರು ತೆರಳಿದ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ.ಕಲ್ಲು ತೂರಾಟ ಬಳಿಕ ಲಾಠಿ ಚಾರ್ಜ್ ನಡೆಸಿದ್ದ ಮಹಾರಾಷ್ಟ್ರ ಪೊಲೀಸರು ಜನರನ್ನು ನಿಯಂತ್ರಿಸಿದ್ದಾರೆ.ಲಾಠಿ ಚಾರ್ಜ್ ಬಳಿಕ ಜಾಲ್ನಾ ಜಿಲ್ಲೆಯ ವಡಿಗೋದ್ರಿ ಬಳಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದ್ದು,ಈ ವೇಳೆ ಕೆಎಸ್‌ಆರ್‌ಟಿಸಿ ಬಸ್, ಮಹಾರಾಷ್ಟ್ರ ಸಾರಿಗೆ ಬಸ್ ಸೇರಿ ಆರು ವಾಹನಗಳಿಗೆ ಕಿಡಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು,ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.ಮಹಾರಾಷ್ಟ್ರ ಪೊಲೀಸರ ಜೊತೆ ಸಂಪರ್ಕದಲ್ಲಿರುವ ಕರ್ನಾಟಕ ಸಾರಿಗೆ ಅಧಿಕಾರಿಗಳು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *