ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ..

ಬೆಳಗಾವಿ-ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗ ಮತ್ತು ಬಿಜೆಪಿ ನಾಯಕರುಗಳು ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ರಾವಣನಿಗೆ ಹೋಲಿಕೆ ಮಾಡಿ ಪೋಸ್ಟರ್ ಬಿಡುಗಡೆ ಮಾಡಿರುವದನ್ನು ಖಂಡಿಸಿ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ *ಬಿಜೆಪಿಯವರ ಈ ನಡೆಯನ್ನು ಖಂಡಿಸಿ ಇಂದು ಶನಿವಾರ ಮದ್ಯಾಹ್ನ 12-00 ಗಂಟೆಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವೀರ ಸಂಗೊಳ್ಳಿ ರಾಯಣ್ಣ ವೃತ್ತದ “ಕಾಂಗ್ರೆಸ್ ಭವನ್”ದ ಮುಂದುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ ಎಲ್ಲ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ ಹಾಗೂ ಅಸೀಪ್ ರಾಜು ಸೇಠ ಕೋರಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *