Breaking News

ನಾಳೆ ಬೆಳಗಾವಿಯಲ್ಲಿ ರಾಜ್ತೋತ್ಸವದ ಪೂರ್ವಭಾವಿ ಸಭೆ

ಬೆಳಗಾವಿ- ಬೆಳಗಾವಿಯಲ್ಲಿ ಈ ಬಾರಿಯ ರಾಜ್ಯೋತ್ಸವವನ್ನು ಅಭೂತಪೂರ್ವ ಗೊಳಿಸುವ ನಿಟ್ಟಿನಲ್ಲಿ ನಾಳೆ ಗುರುವಾರ ಬೆಳಗಾವಿ ಜಿಲ್ಲಾಡಳಿತ ಪೂರ್ವಭಾವಿ ಸಭೆ ನಡೆಸಲಿದೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಾಳೆ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಜ್ಯೋತ್ಸವದ ಸಭೆ ನಡೆಸಲಿದ್ದು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಾಳೆ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಎಲ್ಲ ಕನ್ನಡಪರ ಹೋರಾಟಗಾರರು, ಮತ್ತು ಕನ್ನಡದ ಅಭಿಮಾನಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *