Breaking News

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ..

ಬೆಳಗಾವಿ-ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆಯಾಡಿದ್ದಾರೆ.ಬೆಳಗಾವಿ ವಿಭಾಗದ ಜಂಟಿ ಆಯುಕ್ತೆ ದ್ರಾಕ್ಷಾಯಿಣಿ ಚೌಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇಪ್ಪತ್ತೈದು ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಜಂಟಿ ಆಯುಕ್ತೆ ದ್ರಾಕ್ಷಾಯಿಣಿ ಅವರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.

ವಿಕಾಸ್ ಕೋಕಣೆ ಎಂಬುವವರಿಂದ 25ಸಾವಿರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.ಜಿಎಸ್‌ಟಿ ವಿಚಾರವಾಗಿ ವ್ಯಾಜ್ಯ ಬಗೆ ಹರಿಸಿ ಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ನೀಡಿದ್ದ ವಿಕಾಸ್.ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಂದುವರೆದಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *