Breaking News

ಬೆಳಗಾವಿ ಎಪಿಎಂಸಿಯಲ್ಲಿ ಯುವರಾಜನ ಪಟ್ಟಾಭಿಷೇಕ

ಬೆಳಗಾವಿ

ಬೆಳಗಾವಿಯ ಪ್ರತಿಷ್ಠಿತ ಕೃಷಿ ಉತ್ಪನ ಮಾರುಕಟ್ಟೆ ಸಮಿತಿ ( ಎಪಿಎಂಸಿ) ಯ ಅಧ್ಯಕ್ಷರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಯುವರಾಜ್ ಕದಂ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಹಾದೇವಿ, ಮಹಾದೇವಿ ಖಾನಗೌಡರ( ಹುದಲಿ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಅಧ್ಯಕ್ಷ ಸ್ಥಾನಕ್ಕೆ ಯುವರಾಜ್ ಕದಂ, ಸುಧೀರ ಗಡ್ಡೆ,ಸಂಜು ಮಾದರ ಮೂವರು ನಾಮಪತ್ರ ಸಲ್ಲಿಸಿದ್ದರು. ಕೊನೆಯ ಗಳಿಗೆಯಲ್ಲಿ ಎಲ್ಲರೂ ನಾಮಪತ್ರ ವಾಪಸ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಯುವರಾಜ್ ಕದಂ ಒಬ್ಬರೆ ಉಳಿದುಕೊಂಡರು. ಹೀಗಾಗಿ ಅಧ್ಯಕ್ಷರಾಗಿ ಕದಂ, ಉಪಾಧ್ಯಕ್ಷರಾಗಿ ಖಾನಗೌಡರ ಅವರು ಅವಿರೋಧವಾಗಿ ಆಯ್ಕೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೂಚನೆಯ ಮೆರೆಗೆ ಎಪಿಎಂಸಿಯ 11ಜನ ಚುನಾಯಿತ ಸದಸ್ಯರು ಒಗ್ಗಟಾಗಿ ಒಮ್ಮತಕ್ಕೆ ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *