Breaking News

ಸುವರ್ಣಸೌಧ ನಿರ್ಮಾಣದಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ

ಸುವರ್ಣಸೌಧ ನಿರ್ಮಾಣದಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ: ಸಭಾಪತಿ ಬಸವರಾಜ್ ಹೊರಟ್ಟಿ

ಬೆಳಗಾವಿ, ನ.7(ಕರ್ನಾಟಕ ವಾರ್ತೆ): ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ(ನ.7) ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ ಇಲ್ಲದಂತಾಗಿದೆ ಎಂದು ಹೇಳಿದರು.
****

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *