ಮೂಡಲಗಿಯಲ್ಲಿ ಬಾಲಕನ ಆತ್ಮಹತ್ಯೆ.

ಬೆಳಗಾವಿ- ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲಾಟ್‌ನಲ್ಲಿ ನಡೆದಿದೆ.

ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.ದೀಪಾವಳಿ ರಜೆ ಇದೆ ಅಂತ ತಿರುಗಬೇಡ, ಓದಿಕೋ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ,ಇಷ್ಟಕ್ಕೆ ಮನನೊಂದು ತಮ್ಮ ಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಸಮರ್ಥ ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈ ಕುರಿತು ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ …

Leave a Reply

Your email address will not be published. Required fields are marked *