Breaking News

ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ

ಹೊಸ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಹೊಸ ವಂಟಮೂರಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಅಮಾನವೀಯವಾಗಿ ಹಲ್ಲೆಗೊಳಗಾದ ನೊಂದ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧೈರ್ಯ ತುಂಬಿದರು.

ಈ ವೇಳೆ ಮಾತನಾಡಿ, ಹೊಸ ವಂಟಮೂರಿ ಗ್ರಾಮದಲ್ಲಿ
ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂತ್ರಸ್ತ ಮಹಿಳೆಯ ನೆರವಿಗಾಗಿ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇದಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು,ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಹೊಸ ವಂಟಮೂರಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Check Also

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ …

Leave a Reply

Your email address will not be published. Required fields are marked *