ಚಿಕ್ಕೋಡಿ ಬಿಜೆಪಿ ಟಿಕೆಟ್ ಗಾಗಿ ಹಾಲಿ,ಮಾಜಿಗಳ ನಡುವೆ ಕಿತ್ತಾಟ..!!

ಬೆಳಗಾವಿ-ಚಿಕ್ಕೋಡಿ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಫೈಟ್ ಜೋರಾಗಿದ್ದು ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಂಸದ ಹಾಗೂ ಹಾಲಿ ಸಂಸದರ ಕಾದಾಟ ಆರಂಭವಾಗಿದೆ.

ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಂಸದ ರಮೇಶ ಕತ್ತಿ ನಡುವೆ ಬಿಗ್ ಫೈಟ್ ನಡೆದಿದ್ದು ಮಾಜಿ ಸಂಸದ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರ ಹಾಗೂ ಕತ್ತಿ ಬೆಂಬಲಿಗರ ಒತ್ತಾಯಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಚಿಕ್ಕೋಡಿ ಅಥವಾ ಬೆಳಗಾವಿ ಲೋಕಸಭೆಯಿಂದ ರಮೇಶ ಕತ್ತಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಬಿಜೆಪಿ ಹೈ ಕಮಾಂಡವನ್ನ ಒತ್ತಾಯಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ರಮೇಶ ಕತ್ತಿ ಅವರಿಗೆ ಟಿಕೆಟ್ ಕೈ ತಪ್ಪಿದೆ ಹೀಗಾಗಿ ಈ ಬಾರಿ ಟಿಕೆಟ್ ನೀಡಬೇಕು. ರಾಜ್ಯಸಭಾ ಸದಸ್ಯ ಮಾಡುವ ಭರವಸೆಯನ್ನ ಮಾಜಿ ಸಿಎಂ ಯಡಿಯೂರಪ್ಪ ಅವರು ರಮೇಶ ಕತ್ತಿ ಅವರಿಗೆ ನೀಡಿದ್ದರು.ಯಡಿಯೂರಪ್ಪ ಅವರ ಭರವಸೆ ಭರವಸೆಯಾಗಿ ಉಳಿದಿದೆ.ಕಳೆದ ಹಲುವು ವರ್ಷಗಳಿಂದ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ರಮೇಶ ಕತ್ತಿ ಕೆಲಸ ಮಾಡುತ್ತಿದ್ದು ಪಕ್ಷದಲ್ಲಿ ರಮೇಶ ಕತ್ತಿ ಅವರಿಗೆ ಸ್ಥಾನಮಾನ ನೀಡುವಂತೆ ಅವರ ಬೆಂಬಲಿಗರ ಆಗ್ರಹಿಸಿದ್ದಾರೆ. ಒಟ್ಟಾರೆ ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಹಾಲಿ ಮಾಜಿಗಳ ನಡುವೆ ಸಂಘರ್ಷ ಶುರುವಾಗಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *