ಬಿಜೆಪಿ ಅಧ್ಯಕ್ಷರು ಮಂಗಲಾ ಅಂಗಡಿ ಮನೆಗೆ ಹೋಗಿದ್ರು ಏನ್ ಚರ್ಚೆ ಮಾಡಿದ್ರು ಗೊತ್ತಾ…!!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರ ಮನೆಗೆ ಭೇಟಿ ನೀಡಿ ಒಂದು ಗಂಟೆ ಚರ್ಚೆ ಮಾಡಿದ ವಿಚಾರ ಈಗ ಬಿಜೆಪಿ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಖಾತ್ರಿಯಾಗಿದೆ ಎಂದು ಹೇಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಅವರು ಘರ್ ವಾಪಸಿ ಮಾಡಿದ ಸಂಧರ್ಭದಲ್ಲೇ ಈ ವಿಚಾರ ಕನಫರ್ಮ್ ಆಗಿದೆ.ನಿನ್ನೆಯ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸಂಸದೆ ಮಂಗಲಾ ಅಂಗಡಿ ಅವರ ಮನೆಗೆ ಭೇಟಿ ನೀಡಿ,ಈ ಬಾರಿ ಟಿಕೆಟ್ ದಿ.ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ,ಅಥವಾ ಸ್ಪೂರ್ತಿ ಅವರಿಗೆ ಕೊಡಬೇಕು ಎನ್ನುವ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಸುಮಾರು ಒಂದು ಗಂಟೆ ಕಾಲ ಈ ವಿಚಾರದ ಬಗ್ಗೆಯೇ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಅವರು ಜಗದೀಶ್ ಶೆಟ್ಟರ್ ಅವರ ಸೊಸೆ ಹೀಗಾಗಿ ಶ್ರದ್ಧಾ ಅವರಿಗೆ ಟಿಕೆಟ್ ಕೊಡುವ ಚಿಂತನೆ ನಡೆದಿದ್ದು ಅಂತಿಮವಾಗಿ ಅಂಗಡಿ ಕುಟುಂಬದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವ ಕುರಿತು ನಡ್ಡಾ ಅವರು ಅಂಗಡಿ ಕುಟುಂಬದ ಅಭಿಪ್ರಾಯ ಪಡೆದಿದ್ದಾರೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.

ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹಿರಿಯ ನಾಯಕ ಪ್ರಭಾಕರ ಕೋರೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *