Breaking News

ಜಗದೀಶ್ ಶೆಟ್ಟರ್ ಮೊದಲು ಬೆಳಗಾವಿಯ ವಿಳಾಸ ಹೇಳಲಿ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬೆನ್ನಲ್ಲಿಯೇ ಈಗ ಸಚೆವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಲಾ ಅಂಗಡಿಗೆ ಟಾಂಗ್ ಕೊಟ್ಟಿದ್ದಾರೆ.ಕುಟುಂಬಕ್ಕಿಂತ ಪಕ್ಷ ಮೊದಲು ಎನ್ನುವ ಮಂಗಲಾ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಸಪೋರ್ಟ್ ಮಾಡಬಹುದಿತ್ತು,ಆದ್ರೆ ಅವರು ಸಪೋರ್ಟ್ ಮಾಡಿದ್ದು ತಮ್ಮ ಬೀಗರಿಗೆ ಪಕ್ಷ ಮೊದಲು ಎಂದು ಮಂಗಲಾ ಅಂಗಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ನಾನು ಮಗನ ಪರವಾಗಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೇನೆ.ಗೋಕಾಕ್ ಮತ್ತು ಅರಭಾಂವಿಯಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ, ಈ ಎರಡೂ ಕ್ಷೇತ್ರಗಳಲ್ಲಿ ಅನೀರಿಕ್ಷಿತ ಫಲಿತಾಂಶ ಬರಲಿದೆ.ಎಂದು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಆರು ಬಾರಿ ಶಾಸಕರಾಗಿ ಗೆದ್ದು ಬಂದಿದ್ದಾರೆ‌ ಈಗ ಅವರು ಬೆಳಗಾವಿ ನನ್ನ ಕರ್ಮಭೂಮಿ ಎಂದು ಹೇಳುತ್ತಿದ್ದಾರೆ.ಜಗದೀಶ್ ಶೆಟ್ಟರ್ ಅವರು ಮೊದಲು ಬೆಳಗಾವಿಯ ತಮ್ಮ ವಿಳಾಸ ಹೇಳಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.

ಎಂಇಎಸ್ ಒಂದು ಪಕ್ಷ ಅಲ್ಲ ಅದೊಂದು ಹೋರಾಟ,ಅದರ ಬಗ್ಗೆ ಚಿಂತನೆ ಮಾಡೋ ಪರಿಸ್ಥಿತಿ ನಮಗಿಲ್ಲ,ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಚಿಕ್ಕೋಡಿಯಿಂದ,ಮೃನಾಲ ಹೆಬ್ಬಾಳಕರ್ ಅವರನ್ನು ಬೆಳಗಾವಿ ಕ್ಷೇತ್ರದಿಂದ ಗೆಲ್ಲಿಸುವದೇ ನಮ್ಮ ಗುರಿ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *