Home / Breaking News / ಆಮೀಷಗಳಿಗೆ ಬಲಿಯಾಗಬೇಡಿ, -ಬಾಲಚಂದ್ರ ಜಾರಕಿಹೊಳಿ

ಆಮೀಷಗಳಿಗೆ ಬಲಿಯಾಗಬೇಡಿ, -ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಪರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತಬೇಟೆ ಮುಂದುವರೆಸಿದ್ದಾರೆ‌

ಶನಿವಾರದಂದು ಮೂಡಲಗಿ ತಾಲ್ಲೂಕಿನ ಅರಭಾವಿ, ಕಲ್ಲೊಳ್ಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ತೆರಳಿ ಮತ ಯಾಚಿಸಿದ ಅವರು, ಮೇ. ೭ ರಂದು ನಡೆಯುವ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.

ದೇಶದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯು ಉತ್ತಮ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರಮೋದಿಯವರಿಂದಾಗಿ ಭಾರತವು ವಿಶ್ವಮಾನ್ಯವಾಗಿದೆ. ಶಕ್ತಿ ಶಾಲಿ ಭಾರತವಾಗುತ್ತಿದೆ. ವಿಶ್ವದಲ್ಲೇ ಪ್ರಗತೀಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿರುವ ಈ ದೇಶಕ್ಕೆ ಮತ್ತೊಮ್ಮೆ ಮೋದಿ ಅವರು ಪ್ರಧಾನಮಂತ್ರಿ ಆಗಬೇಕು. ಇಡೀ ಈ ದೇಶದ ನಾಗರೀಕರ ಆಶಯವಾಗಿದೆ. ಈ ದಿಸೆಯಲ್ಲಿ ಯಾವ ಆಮಿಷಗಳಿಗೂ ಬಲಿಯಾಗದೇ ಸಮರ್ಥ, ಸ್ಥಿರ ಸರ್ಕಾರಕ್ಕಾಗಿಬಿಜೆಪಿಯನ್ನು ಬೆಂಬಲಿಸುವಂತೆ ಅವರು ಕೋರಿದರು.ಜಗದೀಶ್ ಶೆಟ್ಟರ ಅವರಿಗೆ ಮತ ನೀಡಿದರೆ ಅದು ಮೋದಿ ಅವರಿಗೆ ನೀಡಿದಂತೆ. ಶೆಟ್ಟರ ಅವರನ್ನು ಆಯ್ಕೆ ಮಾಡಿದರೆ ನಮ್ಮ ಬೆಳಗಾವಿ ಜಿಲ್ಲೆಗೆ ಮತ್ತಷ್ಟು ಅನುಕೂಲವಾಗಲಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಅವರಿಗೆ ನಾವೆಲ್ಲರೂ ಮತ ನೀಡುವ ಮೂಲಕ ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.

ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಹೋಗಲಿಲ್ಲ. ಆದ್ರೂ ನಂಗೆ ರಾಜ್ಯದಲ್ಲಿಯೇ ೪ ನೇ ಸ್ಥಾನದ ಮುನ್ನಡೇ ಮತಗಳಿಂದ ಆಯ್ಕೆ ಮಾಡಿರುವ ನಿಮ್ಮಗಳ ಋಣಭಾರ ನನ್ನ ಮೇಲಿದೆ. ಈಗ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದೇನೆ. ಅತೀ ಹೆಚ್ಚಿನ ಮತಗಳನ್ನು ಶೆಟ್ಟರ ಅವರ ಶೇ. ನಂ ೨ ರ ಕಮಲ ಗುರುತಿನ ಚಿತ್ರಕ್ಕೆ ನೀಡಿ ಆರಿಸಿ ತರುವಂತೆ ಅವರು ತಿಳಿಸಿದರು.

ಕೆಲವರು ಈ ಚುನಾವಣೆಯಲ್ಲಿ ಮತದಾರರಿಗೆ ಕೆಲವು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬಹಳವೆಂದರೆ ಮೇ. ೭ ರತನಕ ನಿಮ್ಮನ್ನು ಕಾಳಜಿ ಮಾಡಬಹುದು. ಚುನಾವಣೆ ಮುಗಿದ ಬಳಿಕ ನಿಮ್ಮನ್ನು ಕಡೆಗಣಿಸಿ ಹೋಗುತ್ತಾರೆ. ನಾನು ನಿಮ್ಮ ಕಷ್ಟ- ಸುಖದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದೇನೆ. ನಿಮ್ಮ ಸಮಸ್ಯೆಗಳನ್ನು ನಾನು ಪರಿಹರಿಸುತ್ತೇನೆ. ಭೀಕರ ಬರಗಾಲದ ಮಧ್ಯೆಯೂ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಈಗಾಗಲೇ ಹಳ್ಳ ಮತ್ತು ಕಿನಾಲಗಳಿಗೆ ನೀರನ್ನು ಹರಿಸಿದ್ದೇನೆ. ರಾಜ್ಯದಾದ್ಯಂತ ಕುಡಿಯಲು ನೀರು ಸಿಗುತ್ತಿಲ್ಲ. ಮುಂದೊಂದು ದಿನ ನೀರು ಬಂಗಾರಕ್ಕಿಂತ ಹೆಚ್ಚು ಬೆಲೆ ಸಿಗಲಿದೆ. ನೀರಿಗೆ ಮಹತ್ವ ಎಷ್ಟಿದೇ ಎಂಬುದು ನಿಮಗೆ ಈಗಾಗಲೇ ಅರ್ಥವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಜನ ಪ್ರತಿನಿಧಿಗಳು, ವಿವಿಧ ಸಮಾಜಗಳ ಮುಖಂಡರು, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *