Breaking News

ಸಿಡಿಲು ಬಡಿದು ಮಹಿಳೆ ಸಾವು ನಾಲ್ವರಿಗೆ ಗಾಯ…

ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಧಾರಾಕಾರವಾಗಿ ಮಳೆ ಸುರಿದಿದೆ. ಗುಡುಗು,ಸಿಡಿಲು ಬಿರುಗಾಳಿ ಮಿಶ್ರಿತ ಮಹಾಮಳೆಗೆ ಓರ್ವ ರೈತ ಮಹಿಳೆ ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ರಾಯಬಾಗ: ಪಟ್ಟಣದ ಹೊರ ವಲಯದ ಜಮೀನಿನಲ್ಲಿ ಗುರುವಾರ ಕೃಷಿ ಕೆಲಸದಲ್ಲಿ ತೊಡಗಿದ್ದ ಶೋಭಾ ಕೃಷ್ಣಾ ಕುಲಗುಡೆ (43) ಅವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮಲ್ಲಪ್ಪ ಶಂಕರ ಮೇತ್ರಿ (43), ಭಾರತಿ ಕೆಂಪಣ್ಣ ಕಮತೆ (32), ಬಾಬುರಾವ್ ಅಶೋಕ ಚವ್ಹಾಣ (30) ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಶೀಲನೆ ಮಾಡಿದ್ದಾರೆ.

Check Also

ಮಗಳು ದೂರು ಕೊಟ್ಟ ಮೇಲೆ, ವಾರದ ನಂತರ ಸಮಾಧಿಯಿಂದ ಶವ ಹೊರಕ್ಕೆ……!!

ಬೆಳಗಾವಿ-ವಾರದ ಹಿಂದೆ ಮಹಾಂತೇಶ್ ನಗರದ ನಿವಾಸಿ ಸಂತೋಷ ಪದ್ಮಣ್ಣವರ ಅವರ ಸಾವು ಸಹಜ ಸಾವು ಎಂದು ಎಲ್ಲರು ತಿಳಿದುಕೊಂಡಿದ್ದರು, ಆದ್ರೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.