Breaking News

ಮಹ್ಮದ್ ರೋಷನ್ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ – ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ವರ್ಗಾವಣೆ ಮಾಡಿದ್ದು ಮಹ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಯಾಗಿದ್ದಾರೆ

ಹುಬ್ಬಳ್ಳಿ ಹೆಸ್ಕಾಂ ಎಂಡಿ ಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ್ ರೋಷನ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.ನಿತೇಶ್ ಪಾಟೀಲ ಅವರು ಅನೇಕ ಸಂಕಷ್ಟದ ಸಮಯದಲ್ಲಿ ಅತ್ಯಂತ ದಿಟ್ಟವಾಗಿ ಕಾರ್ಯನಿರ್ವಹಿಸಿದ್ದರು.ಪ್ರಕೃತಿ ವಿಕೋಪದ ಸಂಧರ್ಭದಲ್ಲಿ ಅವರು ಮಾಡಿರುವ ಕಾರ್ಯ ಮಾದರಿಯಾಗಿತ್ತು.

ಅತ್ಯಂತ ಪಾರದರ್ಶಕವಾಗಿ ಚುನಾವಣೆಗಳನ್ನು ನಡೆಸಿ ನಿತೇಶ್ ಪಾಟೀಲ ಅವರು ರಾಷ್ಟ್ರದ ಗಮನ ಸೆಳೆದಿದ್ದರು. ನಿತೇಶ್ ಪಾಟೀಲ ಅವರು ಕೈಗೊಂಡಿದ್ದ ಚುನಾವಣಾ ಪ್ರಕ್ರಿಯೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿತ್ತು.ಬೆಳಗಾವಿಯಲ್ಲಿ ನಡೆಯುವ ಚುನಾವಣೆ ನೋಡಲು ಅನೇಕ ರಾಷ್ಟ್ರಗಳ ಚುನಾವಣಾ ಅಧಿಕಾರಿಗಳು ಪ್ರಸಕ್ತ ಲೋಕಸಭೆ ಚುನಾವಣೆಯ ಸಂಧರ್ಭದಲ್ಲಿ ಬೆಳಗಾವಿಗೆ ಭೇಟಿ ನೀಡಿ ನಿತೇಶ್ ಪಾಟೀಲ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದರು.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *