Breaking News

ಬೆಳಗಾವಿ ಅಧಿವೇಶನದ ಶತಮಾನೋತ್ಸವ ಬೆಂಗಳೂರಲ್ಲಿ ಸಭೆ

ಬೆಳಗಾವಿ- 1924 ರಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಸಭೆ ನಡೆಸಿದೆ.

ಬೆಳಗಾವಿ-ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಅದ್ಧೂರಿ ಆಚರಣೆಯ ಕುರಿತು ಪೂರ್ವ ಭಾವಿ ಸಭೆ ನಡೆದಿದೆ.

ಕರ್ನಾಟಕದ ಎರಡನೇ ರಾಜಧಾನಿ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನವನ್ನು ಅದ್ದೂರಿಯಾಗಿ ಸಂಘಟಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ವೇಳೆ ಸಚಿವ ಸಂಪುಟ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Check Also

20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಹೊಸ ಟ್ವೀಸ್ಟ್ , …

ಅವರೂ ಒಪ್ಪಿಕೊಂಡರು ಇವರೂ ಒಪ್ಪಿಕೊಂಡರು…!! ಬೆಳಗಾವಿ- ಬೆಳಗಾವಿ ನಗರದ ರಸ್ತೆಯೊಂದರ ಅಗಲೀಕರಣದಲ್ಲಿ ಭೂಮಿ ಕಳೆದುಕೊಂಡಿದ್ದ ಭೂಮಿ ಮಾಲೀಕರಿಗೆ 20 ಕೋಟಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.