ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯ ಮರ್ಡರ್….

ಬೆಳಗಾವಿ – ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.

ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ ಸೋನದೋಳಿ ಎಂಬಾತ ಕೋಯ್ತಾದಿಂದ ಕುತ್ತಿಗೆ ಭಾಗದಲ್ಲಿ ಕೊಚ್ಚಿ ಹಲ್ಲೆ ಮಾಡಿದ್ದ,ರಾತ್ರಿ ಗಂಭೀರವಾಗಿ ಗಾಯಗೊಂಡ ಮಡ್ಡೆಪ್ಪ ನನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಮಡ್ಡೆಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ

ಹೊಲದ ಸೀಮೆಯ ವಿಚಾರದಲ್ಲಿ ಮಡ್ಡೆಪ್ಪ ಮತ್ತು ಬೀರಪ್ಪನ ನಡುವೆ ಕಲಹ ನಡೆದಿತ್ತು ಇದೇ ವಿಚಾರಕ್ಕೆ ಬೀರಪ್ಪ ಮಡ್ಡೆಪ್ಪನ ಕೊಲೆ ಮಾಡಿದ್ದು ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *