Breaking News

ಕಳ್ಳರನ್ನು ನೋಡಿದ್ದಕ್ಕೆ ಪ್ರಾಣ ಹೋಯ್ತಾ…??

ಬೆಳಗಾವಿ ತಾಲೂಕಿನ ಶಿಂಧೋಳ್ಳಿಯ ಬಾವಿಯಲ್ಲಿ ಮಹಿಳೆಯ ಶವಪತ್ತೆ

• ಕಳ್ಳರು ಬಾವಿಗೆ ಬಿಸಾಕಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ

ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದ ಮಸಣವ್ವ ದೇವಸ್ಥಾನದ ಹಿಂಭಾಗದಲ್ಲಿ ಇರುವ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ‌. ಇದರ ಜೊತೆ ಮಸಣವ್ವ ದೇವಸ್ಥಾನದಲ್ಲಿ‌ ಬೆಳ್ಳಿ ಆಭರಣಗಳೂ ಸಹ ಕಳ್ಳತನವಾಗಿದ್ದು, ದೇವಸ್ಥಾನದಲ್ಲಿ ಆಭರಣ ಕಳ್ಳತನ ಮಾಡಿದ ಕಳ್ಳರೇ ಮಹಿಳೆಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆಂದು ಮಹಿಳೆಯ ಪೋಷಕರು ಆರೋಪ‌ ಮಾಡಿದ್ದಾರೆ. ಶಿಂದೊಳ್ಳಿ ಗ್ರಾಮದ 48 ವರ್ಷದ ಭಾರತಿ ಪೂಜಾರಿ ಮೃತ ಮಹಿಳೆಯಾಗಿದ್ದು ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತನ್ನ ಮನೆಯ ದನಕರಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಮಹಿಳೆ ತೆರಳಿದ್ದಳಂತೆ. ಈ ವೇಳೆ ಮನೆಯ ಪಕ್ಕದಲ್ಲಿಯೇ ಇದ್ದ ಮಸಣವ್ವ ದೇಗುಲದಲ್ಲಿನ ಬೆಳ್ಳಿಯ ಆಭರಣ ಕಳ್ಳತನ ಮಾಡುತ್ತಿದ್ದರಂತೆ. ಸಗಣಿ ಎಸೆದು ಮನೆಗೆ ಬರುವಾಗ
ದೇಗುಲ ಕಳ್ಳತನ ಮಾಡ್ತಿದ್ದ ಕಳ್ಳರನ್ನು ಭಾರತಿ ನೋಡಿದ್ದು ಆಗ ಭಾರತಿಯನ್ನು ಹೊತ್ತೊಯ್ದು ದೇಗಲದ ಹಿಂದಿದ್ದ ಬಾವಿಗೆ ಕಳ್ಳರು ಎಸೆದು ಪರಾರಿಯಾಗಿದ್ದಾರೆ ಎಂದು‌ ಮೃತ ಭಾರತಿ ಪೋಷಕರು ಆರೋಪಿಸಿದ್ದಾರೆ‌. ಇಂದು ಬೆಳಗಿನ ಜಾವ ಭಾರತಿ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ದೇಗುಲ ಎದುರು ಸಗಣಿ ಬುಟ್ಟಿ, ಬಾವಿ ಎದುರು ಮಹಿಳೆಯ ಚಪ್ಪಳಿ ನೋಡಿರುವ ಕುಟುಂಬಸ್ಥರು ತಕ್ಷಣವೇ ಮಾರಿಹಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಪಾಸಣೆ ವೇಳೆ ಬಾವಿಯಲ್ಲಿ ಭಾರತಿ ಪೂಜಾರಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯರೇ ಕಳ್ಳತನ ಮಾಡಿ ಗೊತ್ತಾಗಬಾರದೆಂದು ಈ ಕೃತ್ಯ ಎಸಗಿದ್ದಾರೆಂದು ಭಾರತಿ ಪೋಷಕರು ಆರೋಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಾರಿಹಾಳ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Check Also

ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನ ಹಾರಾಟ ರದ್ದು ಮಾಡಬೇಡಿ- ಜಗದೀಶ್ ಶೆಟ್ಟರ್

ಬೆಳಗಾವಿ-ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.