Breaking News
Home / Breaking News / ಮೂರ್ತಿ ವಿವಾದ ಇಷ್ಟು ಬೇಗ ಇತ್ಯರ್ಥ. ಆಗುತ್ತದೆ ಎಂದು ಗೊತ್ತಿರಲಿಲ್ಲ.

ಮೂರ್ತಿ ವಿವಾದ ಇಷ್ಟು ಬೇಗ ಇತ್ಯರ್ಥ. ಆಗುತ್ತದೆ ಎಂದು ಗೊತ್ತಿರಲಿಲ್ಲ.

ಬೆಳಗಾವಿ-ನಾಲ್ಕು ದಿನದ ಹಿಂದೆ ಬೆಳಗಾವಿಗೆ ಭೇಟಿ ನೀಡುವ ತೀರ್ಮಾನ ಕೈಗೊಂಡಿದ್ದೆ, ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಎಂದು ಗೊತ್ತಿರಲಿಲ್ಲ ಎಂದುಬೆಳಗಾವಿಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅಚ್ಚರಿ ವ್ಯೆಕ್ತ ಪಡಿಸಿದ್ದಾರೆ.

ಇಂದು ಬೆಳಿಗ್ಗೆ ಬೆಳಗಾವಿಗೆ ಆಗಮಿಸಿದ ಅವರು ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು
ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ.
ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯ.
ಕೆಲ ಸಂಕುಚಿತ ಭಾವನೆ ಬೇರೆ ಬೇರೆ ಉಂಟಾಗಿತ್ತು.
ನಿನ್ನೆ ಆಗಿರೋ ತೀರ್ಮಾನ ರಾಷ್ಟ್ರ ಭಕ್ತರಿಗೆ ಸಂತೋಷ ತಂದಿದೆ. ರಾಯಣ್ಣ, ಶಿವಾಜಿ ಇಬ್ಬರು ಜಾತಿ, ಭಾಷೆಯನ್ನು ಮೀರಿದ್ದಾರೆ. ಬೆಳಗಾವಿಯಲ್ಲಿ ಆಗಿರೋ ತೀರ್ಮಾನ ದೇಶಕ್ಕೆ ಮಾದರಿ. ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ ಎಂದು ಈಶ್ವರಪ್ಪ ಹೇಳಿದರು

ಪೀರನವಾಡಿಯ ತೀರ್ಮಾಣ,ಇದು ಮಾದರಿ ತೀರ್ಮಾನ.ಗಲಾಟೆ ಸಂಬಂಧ ಮೂರು ಪ್ರಕರಣ ದಾಖಲು ಆಗಿವೆ, ಈ ಬಗ್ಗೆ ಗೃಹ ಸಚಿವರ ಜತೆಗೆ ಚರ್ಚೆ ಮಾಡಿದ್ದೇನೆ. ಪ್ರಕರಣ ವಾಪಸ್ ಪಡೆಯುವ ಬಗ್ಗೆ ಮಾತಕತೆ ಮಾಡಿದ್ದೇನೆ. ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ಗೆ ಅಭಿನಂದನೆ ಸಲ್ಲಿಸಬೇಕು.
ರಾಯಣ್ಣ ಪ್ರತಿಮೆ ಸಂಬಂಧ ಅನೇಕರು ಹೋರಾಟ ಮಾಡಿದ್ರು ಎಲ್ಲರಿಗೂ ಅಭಿನಂಧಿಸುತ್ತೇನೆ ಎಂದರು ಈಶ್ವರಪ್ಪ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *