Home / Breaking News / ಪೀರನವಾಡಿಯ ಜಂಕ್ಷನ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸರ್ಕಲ್……!

ಪೀರನವಾಡಿಯ ಜಂಕ್ಷನ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸರ್ಕಲ್……!

ಬೆಳಗಾವಿ- ಜಿಲ್ಲಾಡಳಿದ ರಾಜಿ ಸಂಧಾನದ ಒಪ್ಪಂದದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಇಂದು ಪೀರನವಾಡಿ ಜಂಕ್ಷನ್ ನಲ್ಲಿ ಛತ್ರಪತಿ ಶಿವಾಜಿ ಸರ್ಕಲ್ ಎಂದು ಕನ್ನಡ,ಮರಾಠಿ ಎರಡೂ ಭಾಷೆಯಲ್ಲಿರುವ ಫಲಕವನ್ನು ಅನಾವರಣಗೊಳಿಸಿದರು.

ಇಂದು ಬೆಳಿಗ್ಗೆಯೇ ಜಮಾಯಿಸಿದ ನೂರಾರು ಶಿವಾಜಿ ಅಭಿಮಾನಿಗಳು,ಪಟಾಕಿ ಸಿಡಿಸಿ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಫಲಕವನ್ನು ಅನಾವರಣ ಮಾಡಿದ್ರು

ಪೀರನವಾಡಿ ನಾಕಾ ಬಳಿ ‘ಶಿವಾಜಿ ಚೌಕ್’ ಅಂತಾ ನಾಮಫಲಕ ಅನಾವರಣ ಮಾಡಲಾಯಿತು,9 X 15 ಅಡಿಯ ಬೃಹತ್ ನಾಮಫಲಕ ಹಾಕಿದ ಮರಾಠಿ ಭಾಷಿಕ ಮುಖಂಡರು,ಛತ್ರಪತಿ ಶಿವಾಜಿ ಮಹಾರಾಜ ಚೌಕ್, ಪೀರನವಾಡಿ(ಚಿನ್ನಪಟ್ಟಣ)’ ನಾಮಫಲಕ ಉದ್ಘಾಟಿಸಿದರು

ಕನ್ನಡ, ಮರಾಠಿ ಎರಡೂ ಭಾಷೆಯಲ್ಲಿ ಇರುವ ನಾಮಫಲಕ ಅಳವಡಿಕೆ ಮಾಡಿದ ಅವರು,ರಾಯಣ್ಣ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸೌಹಾರ್ದತೆಯ ಸಂದೇಶ ಸಾರಿದರು.

ನಾಮಫಲಕ ಅನಾವರಣ ಬಳಿಕ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.
ಸಂಧಾನಸಭೆ ನಿರ್ಣಯದಂತೆ ಮೂರ್ತಿಗಳು ಇರುವ ಸ್ಥಳದಲ್ಲಿ ಒಂದೊಂದೇ ಧ್ವಜ ಹಚ್ಚಲಾಯಿತು,
ಸಂಗೊಳ್ಳಿ ರಾಯಣ್ಣ ಮೂರ್ತಿ ಇರುವ ಸ್ಥಳದಲ್ಲಿ ಕನ್ನಡ ಧ್ವಜ,ರಾರಾಜಿಸಿತು.ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಇರುವ ಸ್ಥಳದಲ್ಲಿ ಭಗವಾ ಧ್ವಜ ಹಚ್ಚಲಾಯಿತು,ಹೆಚ್ಚುವರಿ ಧ್ವಜಗಳನ್ನು ತೆರವು ಗೊಳಿಸಲಾಯಿತು,

Check Also

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅರೆಸ್ಟ್…..

ಬೆಳಗಾವಿ- ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಎ ಒನ್ ಆರೋಪಿಯಾಗಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ.ರೇವಣ್ಣ ಅವರನ್ನು ಎಸ್ ಐ …

Leave a Reply

Your email address will not be published. Required fields are marked *