Breaking News

ಮಳೆಗೆ ಓರ್ವ ವ್ಯೆಕ್ತಿ,6 ಜಾನುವಾರು,35 ಸಾವಿರ ಹೆಕ್ಟೇರ್ ಬೆಳೆ ನಾಶ- ಡಿಸಿ

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಈ ಬಾರಿ ಓರ್ವ ವ್ಯಕ್ತಿ,6 ಜಾನುವಾರುಗಳ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು.

ಶುಕ್ರವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದ ಜೀವ ಹಾನಿಯಾದ ಜನ ಜಾನುವಾರುಗಳಿಗೆ ಜಿಲ್ಲಾಡಳಿತದಿಂದ ಈಗಾಗಲೇ ಪರಿಹಾರ ನೀಡಲಾಗಿದೆ.

ಅಕ್ಟೋಬರ್ ನಲ್ಲಿ ಸುಮಾರು 62 ಮನೆಗಳು ಮಳೆಯಿಂದ ಹಾನಿಯಾಗಿವೆ.70 ಮನೆಗಳು ಭಾಗಶ ಬಿದ್ದಿವೆ. ಇನ್ನೂ ಸರ್ವೆ ಕಾರ್ಯಾಚರಣೆ ನಡೆಸಲಾಗಿದೆ. ಅವುಗಳಿಗೂ ಸಹ ಪರಿಹಾರ ನೀಡಲಾಗುವುದು ಎಂದರು.

ಮಳೆಯಿಂದ ಸುಮಾರು 35 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6 ಕೋಟಿ 2 ಲಕ್ಷ ಹಣ ಅವರ ಖಾತೆಯ ಮೂಲಕ ಪರಿಹಾರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಅಕ್ಟೋಬರ್ ನಲ್ಲಿ ಯಾವುದೇ ಪ್ರವಾಹ ಬಂದಿಲ್ಲ. ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *