ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಡಿಸಿಎಂ ಸವದಿ

ಬೆಳಗಾವಿ- ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಖಾತೆ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಆಗಿರುವ ಸನ್ಮಾನ್ಯ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ.
ಆದ್ದರಿಂದ ಈಗಾಗಲೇ ಕಂದಾಯ ಇಲಾಖೆಯಿಂದ ರಕ್ಷಣಾ ಇಲಾಖೆಗೆ ಪರ್ಯಾಯ ಜಾಗವನ್ನು ನೀಡಲು ಕ್ರಮ ವಹಿಸಲಾಗಿದ್ದು ರಸ್ತೆ ವಿಸ್ತರಣೆಗೆ ತೊಂದರೆ ಉಂಟಾಗುತ್ತಿರುವ ಜಾಗಗಳನ್ನು ತೆರವು ಮಾಡಿಕೊಡುವಂತೆ ರಕ್ಷಣಾ ಮಂತ್ರಿಗಳಿಗೆ ಮನವಿ ನೀಡಲಾಯಿತು.

ಕಂದಾಯ ಸಚಿವರಾದ ಆರ್ ಅಶೋಕ್ ಉಪಸ್ಥಿತರಿದ್ದರು

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *