Breaking News

ಹಿರೇಬಾಗೇವಾಡಿಯಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ

ಬೆಳಗಾವಿ- ಬೆಳಗಾವಿ ಪಕ್ಕದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕವಾದಿಗಳಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಿದ್ದಾರೆ.

ಗಡಿನಾಡು ಗುಡಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಪಟ್ಟಣದಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕದ ಧ್ವಜ ಹಾರಾಡಿದ್ದು,ಬೆಳಗಾವಿ ಜಿಲ್ಲೆಯಿಂದ ಮತ್ತೇ ಪ್ರತ್ಯೇಕ ರಾಜ್ಯದ ಕೂಗು ಎದ್ದಿದೆ.

ಪೊಲೀಸರ ಕಣ್ಣು ತಪ್ಪಿಸಿ, ಯಾಮಾರಿಸಿ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಿದ ಹೋರಾಟಗಾರರು,ಬೆಳಗಾವಿ ಜಿಲ್ಲೆಯಿಂದಲೇ ಪ್ರತ್ಯೇಕ ರಾಜ್ಯದ ಕಿಡಿ ಹೊತ್ತಿಸಿದ್ದಾರೆ. ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ ಸಮೀತಿಯಿಂದ ಧ್ವಜಾರೋಹಣ ಮಾಡಲಾಗಿದ್ದು. ಹೋರಾಟ ಸಮೀತಿ ಜಿಲ್ಲಾ ಅಧ್ಯಕ್ಷ ಅಡಿವೇಶ್ ಇಟಗಿ ನೇತೃತ್ವದಲ್ಲಿ ಧ್ವಜಾರೋಹಣ ನಡೆದಿದೆ.

ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣಕ್ಕೆ ಪೊಲೀಸ್ ಅಡ್ಡಿಪಡಿಸಲು ಬಂದಾಗ ರಾಷ್ಟ್ರ ಗೀತೆ ಹಾಡಿದ ಹೋರಾಟಗಾರರು, ರಾಷ್ಟ್ರ ಗೀತೆಗೆ ಗೌರವ ಸಲ್ಲಿಸಲು ಪೊಲೀಸ್ ನಿಂತ ವೇಳೆ ಧ್ವಜಾರೋಹಣ ಮಾಡಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಹೋರಾಟಗಾರರು, ಅಭಿವೃದ್ಧಿ ವಿಚಾರದಲ್ಲಿ ಪ್ರತ್ಯೇಕ ರಾಜ್ಯವೇ ಪರಿಹಾರ ಎಂದು ಹೇಳಿದ್ದಾರೆ

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *