ತುರಮರಿ ಕಚರಾ ಡಿಪೋದಲ್ಲಿ ಸಫಾಯಿ ಕಾರ್ಮಿಕನ ಸಾವು…

ಬೆಳಗಾವಿ-ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಟಿಪ್ಪರ್ ನಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋದಲ್ಲಿ ಕಸ ಡಂಪ್ ಮಾಡಲು ಹೋಗಿದ್ದ,ಬೆಳಗಾವಿ ಪಾಲಿಕೆ ಸಫಾಯಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ.

ತುರಮರಿ ಕಚರಾ ಡಿಪೋದಲ್ಲಿ ಕಸ ಡಂಪ್ ಮಾಡುವಾಗ ಟಿಪ್ಪರಿನ ಹೈಡ್ರೋಲೀಕ್ ಪೈಪ್ ತಲೆಗೆ ಬಡಿದು ಸಫಾಯಿ ಕಾರ್ಮಿಕ ಮೃತಪಟ್ಟಿದ್ದಾನೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಫಾಯಿ ಕಾರ್ಮಿಕನಾಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ,ಕಂಗ್ರಾಳಿ ಖುರ್ದ ಗ್ರಾಮದ ಜ್ಯೋತಿನಗರದ,ಕಲ್ಲಪ್ಪಾ ಕಾಂಬಳೆ ಮೃತಪಟ್ಟಿದ್ದು,ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಕಲ್ಲಪ್ಪಾ ಕಾಂಬಳೆ ಗುತ್ತಿಗೆ ಆಧಾರದ ಮೇಲೆ ಪಾಲಿಕೆಯಲ್ಲಿ ಸಫಾಯಿ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಗೊತ್ತಾಗಿದೆ.

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *