Breaking News

ತುರಮರಿ ಕಚರಾ ಡಿಪೋದಲ್ಲಿ ಸಫಾಯಿ ಕಾರ್ಮಿಕನ ಸಾವು…

ಬೆಳಗಾವಿ-ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಟಿಪ್ಪರ್ ನಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋದಲ್ಲಿ ಕಸ ಡಂಪ್ ಮಾಡಲು ಹೋಗಿದ್ದ,ಬೆಳಗಾವಿ ಪಾಲಿಕೆ ಸಫಾಯಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ.

ತುರಮರಿ ಕಚರಾ ಡಿಪೋದಲ್ಲಿ ಕಸ ಡಂಪ್ ಮಾಡುವಾಗ ಟಿಪ್ಪರಿನ ಹೈಡ್ರೋಲೀಕ್ ಪೈಪ್ ತಲೆಗೆ ಬಡಿದು ಸಫಾಯಿ ಕಾರ್ಮಿಕ ಮೃತಪಟ್ಟಿದ್ದಾನೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಫಾಯಿ ಕಾರ್ಮಿಕನಾಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ,ಕಂಗ್ರಾಳಿ ಖುರ್ದ ಗ್ರಾಮದ ಜ್ಯೋತಿನಗರದ,ಕಲ್ಲಪ್ಪಾ ಕಾಂಬಳೆ ಮೃತಪಟ್ಟಿದ್ದು,ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಕಲ್ಲಪ್ಪಾ ಕಾಂಬಳೆ ಗುತ್ತಿಗೆ ಆಧಾರದ ಮೇಲೆ ಪಾಲಿಕೆಯಲ್ಲಿ ಸಫಾಯಿ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಗೊತ್ತಾಗಿದೆ.

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವರ್ಕ್ ಫ್ರಾಮ್ ಹೋಮ್….!!!

  ಬೆಳಗಾವಿ- ರಸ್ತೆ ಅಪಘಾತದದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಚವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ …

Leave a Reply

Your email address will not be published. Required fields are marked *