Breaking News

ಇಬ್ಬರು ಕಂದಮ್ಮಗಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

*ಕಾಣೆಯಾಗಿದ್ದ ತಾಯಿ, ಇಬ್ಬರು ಮಕ್ಕಳು ನದಿಯಲ್ಲಿ ಹೆಣವಾಗಿ ಪತ್ತೆ*

ಬೆಳಗಾವಿ/ಗೋಕಾಕ: ಮನೆಯಲ್ಲಿ ಜಗಳವಾಡಿ ಮೂರು ದಿನಗಳಿಂದ ಕಾಣೆಯಾಗಿದ್ದ ತಾಯಿ, ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಗೋಕಾಕ ತಾಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(೩೦), ಪೂಜಾ(೪), ಲಕ್ಷ್ಮೀ (೨) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಜಗಳವಾಡಿ, ಜೀವನದಲ್ಲಿ ಜಿಗುಪ್ಸೆಗೊಂಡು ಮೂರು ದಿನಗಳಿಂದ ಕಾಣೆಯಾಗಿದ್ದರು.

ನಾಪತ್ತೆ ಆಗಿರುವ ಬಗ್ಗೆ ಗಂಡನ ಮನೆಯವರು ಶನಿವಾರ ದೂರು ನೀಡಿದ್ದರು. ರವಿವಾರ ಬೆಳಗ್ಗೆ ಘಟಪ್ರಭಾ ನದಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಈ ಕುರಿತು
ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.