ಬೆಳಗಾವಿ ನಗರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ‌…..

ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ  ಮಂಗಲಾ ಸುರೇಶ್ ಅಂಗಡಿ ರವರ ಪರವಾಗಿ ಬಿಜೆಪಿ ಗೆ ಮತ ನೀಡಬೇಕೆಂದು ಇಂದು ಶಾಸ್ತ್ರೀ ನಗರದಲ್ಲಿ ಶಾಸಕರಾದ  ಅಭಯ ಪಾಟೀಲ ರವರ ಶ್ರೀಮತಿಯವರಾದ ಪ್ರೀತಿ ಅಭಯ ಪಾಟೀಲ ರವರು ಬಿರುಸಿನ ಪ್ರಚಾರ ನಡೆಸಿದರು.

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಇಂದು ಬೆಳಗಾವಿ ನಗರದಲ್ಲಿ ಪಾದಯಾತ್ರೆ ನಡೆಸಿ,ಮತಯಾಚಿಸಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ,ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಶಾಸಕ ಅನೀಲ ಬೆನಕೆ ಅವರು ಮಂಗಲಾ ಅಂಗಡಿ ಅವರಿಗೆ ಸಾಥ್ ನೀಡಿದ್ರು ವಿವಿಧ ಬಡಾವಣೆಗಳಲ್ಲಿ ಮಂಗಲಾ ಅಂಗಡಿ ಮನೆ ಮನೆಗೆ ತೆರಳಿ,ಮತಯಾಚಿಸಿದರು.

ಶಾಸಕ ಅನೀಲ ಬೆನಕೆ ಮಾತನಾಡಿ,ಕೇಂದ್ರದಲ್ಲಿರುವ ನರೇಂದ್ರ ಮೋದಿ ಅವರ ಸರ್ಕಾರ,ರಾಜ್ಯದಲ್ಲಿರುವ ಯಡಿಯೂರಪ್ಪನವರ ಸರ್ಕಾರ ಬೆಳಗಾವಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ,ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ,ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಂಗಲಾ ಅಂಗಡಿಯವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸಿದರೆ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ವಿನ ಅನುದಾನ ತರಲು ಸಾದ್ಯವಾಗುತ್ತದೆ ಎಂದು ಅನೀಲ ಬೆನಕೆ,ಹೇಳಿದ್ರು

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಮತಯಾಚಿಸುವ ಸಂಧರ್ಭದಲ್ಲಿ ಮತದಾರರು ದಿ. ಸುರೇಶ್ ಅಂಗಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *