ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ

ಬೆಳಗಾವಿ-ಗಡಿಭಾಗದ ಬೆಳಗಾವಿಯಲ್ಲಿ ಸಮಾಧಿಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ,ಜೀವ ತುಂಬಲು ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ ಬರುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿ ಶುಭಂ ಶಿಳಕೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ,ಅವರ ಪರ ಪ್ರಚಾರ ಮಾಡಲು ಸ್ವತಹ ನಾನು 14 ರಂದು ಬೆಳಗಾವಿಗೆ ಹೋಗುತ್ತಿದ್ದೇನೆ ಎಂದು ಸಂಜಯ ರಾವತ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ.ಶಿವಸೇನೆಯ ಸಂಜಯ ರಾವತ ಯಾರ ವಿರುದ್ಧ ಸೇಡು ತೀರಿಸಿಕೊಳ್ಳಲು ಬೆಳಗಾವಿಗೆ ಬರುತ್ತಿದ್ದಾರೆ ಅನ್ನೋದು ಈಗ ಚರ್ಚೆಯ ವಿಷಯವಾಗಿದೆ.

ಲೋಕಸಭಾ ಉಪ ಚುನಾವಣೆಯಲ್ಲಿ ಎಂಈಎಸ್ ಅಭ್ಯರ್ಥಿ ಶುಭಂ ಶಿಳಕೆ, ಚಂದಾ ವಸೂಲಿ ಮಾಡುತ್ತಿದ್ದು ಈಗ ಶಿವಸೆನೆಯ ಮುಖಂಡ ಸಂಜಯ ರಾವತ ಬೆಳಗಾವಿಗೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿ ಮುಗ್ದ ಮರಾಠಿಗರನ್ನು ಪ್ರಚೋದಿಸುವ ಮೂಲಕ ಬಹುತೇಕ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಂತ್ರ ರೂಪಿಸಿರಬಹುದು ಅನ್ನೋದು ಎಲ್ಲರ ಲೆಕ್ಕಾಚಾರ ವಾಗಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *