Breaking News

ಇಂದು ಬೆಳಗಾವಿಗೆ ಸಿಎಂ ಬಸವರಾಜ ಬೊಮ್ಮಾಯಿ.

ಬೆಳಗಾವಿ- ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇಂದು ಮೊದಲಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಮಧ್ತಾಹ್ನ ಸುಮಾರು ಎರಡು ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸುವ ಅವರು,ಅಧಿಕಾರಿಗಳ ಜೊತೆ ಕೋವೀಡ್ ನಿರ್ವಹಣೆ ಮತ್ತು ಪ್ರವಾಹ ಪರಿಹಾರ ಕಾಮಗಾರಗಳ ಪ್ರಗತಿ ಪರಶೀಲನೆ ನಡೆಸಲಿದ್ದಾರೆ. ನಂತರ ಸಾಂಬ್ರಾ ವಿಮಾನ ನಿಲ್ಧಾಣದ ಮೂಲಕ ರೆಗ್ಯಲರ್ ಫ್ಲಾಯಿಟ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿಯೂ ಇದೆ.ಇದೊಂದು ಕ್ರಾಂತಿಯ ನೆಲ ಎನ್ನುವ ಅಭಿಮಾನವೂ ಇದ್ದು ಅವರು ಮುಖ್ಯಮಂತ್ರಿಯಾಗಿ ಇಂದು ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ.

ಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಜನ ನಲುಗಿ ಹೋಗಿದ್ದಾರೆ.ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ,ಸೂರು ಕಳೆದುಕೊಂಡ ಬಡವರಿಗೆ ಈ ನಾಡಿನ ದೂರೆ ಯಾವ ರೀತಿಯಲ್ಲಿ ಸಮಾಧಾನ ಪಡಿಸುತ್ತಾರೆ ಎನ್ನುವದನ್ನು ಕಾದು ನೋಡಬೇಕಾಗಿದೆ.

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಪ್ರೀಯಾಂಕಾ ಗಾಂಧಿ

ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು …

Leave a Reply

Your email address will not be published. Required fields are marked *