ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ರಶೀದ್ ನೇಮಕ..

ಬೆಳಗಾವಿ-ಬ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ಸಂಘಟನೆಯ. ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಗೋಕಾಕಿನ ರಶೀದ್ ಮಕಾನದಾರ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಘಟನೆಯ ಸಂಸ್ಥಾಪಕ, ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮಿ ಧಾರವಾಡಕರ ಅವರು ರಶೀದ್ ಮಕಾನದಾರ್ ಅವರನ್ನು ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ಸಂಘಟನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವದರ ಜೊತೆಗೆ ಜಿಲ್ಲೆಯಲ್ಲಿ ಬ್ರಷ್ಟಾಚಾರ ನಿರ್ಮೂಲನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ.

ರಶೀದ್ ಮಕಾನದಾರ ಅವರು ಕೂಡಲೆ ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕಾರ್ಯಪ್ರವೃತ್ತ ರಾಗುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Check Also

ಬೈಕ್ ಮೇಲೆ ಹೋಗುವಾಗ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯ

ಯಮಕನಮರ್ಡಿ- ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಂಕಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ …

Leave a Reply

Your email address will not be published. Required fields are marked *