Breaking News

ಬೆಳಗಾವಿಯ ಆರ್‌ಎಸ್ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ…

ಬೆಳಗಾವಿ-ಬೆಳಗಾವಿಯ ಆರ್‌ಎಸ್ಎಸ್ ಕಚೇರಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ನೀಡಿ ಸ್ಥಳೀಯ ಆರ್ ಎಸ್ ಎಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದ್ರು

ಬೆಳಗಾವಿಯ ಶಾಸ್ತ್ರಿನಗರದಲ್ಲಿರುವ ಆರ್‌ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಅವರು,ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ಆಗಮಿಸಿರುವ ಗೋವಾ ಸಿಎ‌ಂ ಪ್ರಮೋದ್ ಸಾವಂತ್ ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದರು.

ಬೆಳಗಾವಿಯ ಆರ್‌ಎಸ್ಎಸ್ ಮುಖಂಡರ ಜೊತೆ ಪ್ರಮೋದ್ ಸಾವಂತ್ ಚರ್ಚೆ ಮಾಡಿದ್ರು,ಆರ್‌ಎಸ್ಎಸ್ ಮುಖಂಡರ ಭೇಟಿ ಬಳಿಕ ಗೋವಾ ಸಿಎಂ ಪ್ರಮೋದ್ ಸಾವಂತ್ ಮಾದ್ಯಮಗಳ ಜೊತೆ ಮಾತನಾಡಿದ್ರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ,ಎಲ್ಲೇ ಹೋದರೂ ಆರ್‌ಎಸ್ಎಸ್ ಕಚೇರಿಗೆ ಭೇಟಿ ಕೊಡ್ತೀನಿ,ಅದೇ ರೀತಿ ಇಲ್ಲಿಯೂ ಭೇಟಿ ನೀಡಿದ್ದೇನೆ.ಬೆಳಗಾವಿ ಕಾರ್ಯಕ್ರಮ ಮುಗಿಸಿ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ತೆರಳುತ್ತೇನೆ.
ಕೊಲ್ಲಾಪುರದಲ್ಲಿ ನನ್ನ ಸ್ನೇಹಿತರು ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.ಗೋವಾದಲ್ಲಿ ಪ್ರವಾಸೋದ್ಯಮ, ಉದ್ಯೋಗಸೃಷ್ಟಿಗೆ ಹೆಚ್ಚಿನ ಮಹತ್ವ ಕೊಡ್ತೀವಿ ಎಂದ ಪ್ರಮೋದ್ ಸಾವಂತ್ ಹೇಳಿದ್ರು.

ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಸೇರಿ ಇತರೆ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ನಕಾರ ವ್ಯೆಕ್ತಪಡಿಸಿದ್ರು.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *