ಶರದ ಪವಾರ್, ಎದುರು ಎಂಇಎಸ್ ಪುಂಡರ ಪುಂಡಾಟಿಕೆ….

ಬೆಳಗಾವಿ- ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಎದುರೇ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಮರಾಠಾ ಬ್ಯಾಂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ,ಶರದ್ ಪವಾರ್ ಭಾಷಣ ಶುರುವಾಗುತ್ತಿದ್ದಂತೆ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿದ್ದಾರೆ.ಮರಾಠ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶರದ್ ಪವಾರ್, ಎಂಇಎಸ್ ಪುಂಡರ ಪೂರ್ವನಿಯೋಜಿತ ಘೋಷಣೆಗಳಿಂದ ತಬ್ಬಿಬ್ಬಾದರು.

ಶರದ್ ಪವಾರ್‌ ಭಾಷಣ ಶುರು ಮಾಡುತ್ತಿದ್ದಂತೆ ನಾಡದ್ರೋಹಿ ಎಂಇಎಸ್ ಪುಂಡರು,ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಘೋಷಣೆ ಕೂಗಿದರು.ಸಭೆಯಲ್ಲಿ ಭಾಗಿಯಾಗಿದ್ದ ಕೆಲವು ಎಂಇಎಸ್ ಪುಂಡರು ಪುಂಡಾಟಿಕೆ ಪ್ರದರ್ಶಿಸಿದರು.

ಘೋಷಣೆ ಕೂಗುವ ವೇಳೆ ಸುಮ್ಮನೆ ನಿಂತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಭಾಷಣ ಪ್ರಾರಂಭ ಮಾಡಬಹುದಾ? ಎಂದು ಎಂಇಎಸ್ ಕಾರ್ಯಕರ್ತರನ್ನು ಕೇಳಿದ ಶರದ್ ಪವಾರ್,ನಿಮ್ಮ ಅನುಮತಿ ಪಡೆದು ಭಾಷಣ ಶುರುಮಾಡ್ತಿನಿ ಎಂದ ಶರದ್ ಪವಾರ್ ಎಂಇಎಸ್ ಪುಂಡರಿಗೆ ಹೇಳಿದ್ರು.ಎಂಇಎಸ್ ಮುಖಂಡ ದೀಪಕ್ ದಳವಿ, ಕೃಷ್ಣ ಮೊಪಸೆ, ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

Check Also

ಕುರಿ ಹಿಂಡಿನ ಚಲನವಲನ ಮನೆಯಲ್ಲೇ ಇದ್ದ ವಿಲನ್….!!!

ಬೆಳಗಾವಿ- ಒಬ್ಬ ವ್ಯಕ್ತಿಯ ಕೊಲೆ ನಡೆದಾಗ ಆರೋಪಿಗಳನ್ನು ಪತ್ತೆ ಮಾಡುವದು ಸುಲಭವಲ್ಲ, ಪೋಲೀಸರು ಈ ವಿಚಾರದಲ್ಲಿ ಎಲ್ಲ ಆಯಾಮಗಳಲ್ಲಿ ತನಿಖೆ …

Leave a Reply

Your email address will not be published. Required fields are marked *