ಸರ್ಕಾರಿ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ರಾಯವ್ವಗೋಳ ನೇಮಕ

ಬೆಳಗಾವಿ- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಜಗದೀಶ್ ಗೌಡಪ್ಪ ಪಾಟೀಲ ಅವರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಈ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರನ್ನಾಗಿ,ಬಸವರಾಜ ತಾನಾಜಿ ರಾಯವ್ವಗೋಳ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಬಸವರಾಜ ತಾನಾಜಿ ರಾಯವ್ವಗೋಳ ಅವರು ಬೆಳಗಾವಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷಾರಿ ಅವರು ಬಸವರಾಜ ತಾನಾಜಿ ರಾಯವ್ವಗೋಳ ಅವರನ್ನು ಮುಂದಿನ ಆದೇಶದವರೆಗೆ ಪ್ರಭಾರಿ ಅಧ್ಯಕ್ಷರಾಗಿ ಸಂಘದ ಕಾರ್ಯಚಟುವಟಿಕೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ.

ಜಗದೀಶ್ ಗೌಡಪ್ಪ ಪಾಟೀಲ ಅವರು ಜಿಲ್ಲಾ ಅದ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ನಿವೇಶನ ಕೊಡಿಸುವದಾಗಿ ಸರ್ಕಾರಿ ನೌಕರರಿಂದ ಹಣ ಪಡೆದಿದ್ದರು.ಆದ್ರೆ ಎಷ್ಟು ಜನ ನೌಕರರಿಗೆ ನಿವೇಶನ ಸಿಕ್ಕಿದೆ,ಎನ್ನುವದನ್ನು ಜಗದೀಶ್ ಗೌಡಪ್ಪ ಪಾಟೀಲ ಅವರು ಸ್ಪಷ್ಟಪಡಿಸಬೇಕಾಗಿದೆ.ಅವರು ರಾಜೀನಾಮೆ ನೀಡಿದ್ದು ಯಾವ ಕಾರಣಕ್ಕಾಗಿ ಎನ್ನುವದು ಗೊತ್ತಾಗಿಲ್ಲ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *