Breaking News
Home / Breaking News / ವಾಹನಗಳಿಗೆ ಬೆಂಕಿ,ಕಲ್ಲು ತೂರಾಟ,ಮಾರಾಮಾರಿ,ಓರ್ವನ ಕೊಲೆ

ವಾಹನಗಳಿಗೆ ಬೆಂಕಿ,ಕಲ್ಲು ತೂರಾಟ,ಮಾರಾಮಾರಿ,ಓರ್ವನ ಕೊಲೆ

ಬೆಳಗಾವಿ:ಅದೊಂದು ಜಮೀನು ವಿವಾದ,ಈ ವಿವಾದ ಇವತ್ತು ಕಾರು ಪಾರ್ಕಿಂಗ್ ವಿಚಾರದಲ್ಲಿ ಮತ್ತೆ ಭುಗಿಲೆದ್ದು,ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಯಿತು.

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಕೆಲ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಘರ್ಷಣೆಯಾಗಿ,ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತು ಈ ಗಲಾಟೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಗೌಂಡವಾಡ ಗ್ರಾಮದ ಮುಖಂಡ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಕಾರು, ದ್ವಿಚಕ್ರ ವಾಹನಗಳು ಮತ್ತು ಮೂರು ಹುಲ್ಲಿನ ಬಣವಿಗೆ ಬೆಂಕಿ ಹಚ್ಚಲಾಗಿದೆ. ‌ಇದರಿಂದ ಪರಿಸ್ಥಿತಿ ವಿಕೋಪಕ್ಕೆ‌ ತಿರುಗಿದೆ. ಅಗ್ನಿಶಾಮಕ ದಳ‌ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು

ಘಟನೆ ನಡೆದ ಬಳಿಕ,
ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಪಿ.ವಿ. ಸ್ನೇಹಾ, ಗ್ರಾಮೀಣ ಎಸಿಪಿ ಗುಡಾಜಿ ಹಾಗೂ ಕಾಕತಿ ಇನ್ಸ್ಪೆಕ್ಟರ್ ಗುರುನಾಥ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.ಈಗ ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ.

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *