Breaking News

ನಿರಂತರ ಮಳೆಗೆ 20ಕ್ಕೂ ಅಧಿಕ ಮನೆಗಳು, ಒಂದು ಶಾಲಾ ಕೊಠಡಿಗೆ ಹಾನಿ

ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆಯ ಅಬ್ಬರ

ಬೆಳಗಾವಿ-ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ.ನಿರಂತರ ಮಳೆಗೆ 20ಕ್ಕೂ ಅಧಿಕ ಮನೆಗಳು, ಒಂದು ಶಾಲಾ ಕೊಠಡಿಗೆ ಹಾನಿಯಾಗಿವೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಹಲವೆಡೆ ಮನೆಗಳ ಗೋಡೆ ಕುಸಿದಿದ್ದು ಕಿತ್ತೂರು ತಾಲೂಕಿನಲ್ಲಿ ಧಾರಾಕಾರ ಮಳೆಗೆ 20 ಮನೆಗಳಿಗೆ ಹಾನಿಯಾಗಿವೆ.
ಕತ್ರಿದಡ್ಡಿ, ದಿಂಡಲಕೊಪ್ಪ, ಗಲಗಿನಮಡಾ, ನಿಚ್ಚಣಕಿ, ದೇಗಾಂವ ಚಿಕ್ಕನಂದಿಹಳ್ಳಿ, ತಿಗಡೊಳ್ಳಿ, ಬೈಲೂರು ಗ್ರಾಮಗಳಲ್ಲಿ ಮನೆ ಗೋಡೆಗಳ ಕುಸಿದು
ಪ್ಲಾಸ್ಟಿಕ್ ಚೀಲ ಕಟ್ಟಿಕೊಂಡು ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.

ಖಾನಾಪುರ ತಾಲೂಕಿನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ.ಖಾನಾಪುರ ತಾಲೂಕಿನ ಗುರ್ಲಗುಂಜಿ ಗ್ರಾಮದಲ್ಲಿರುವ ಸರ್ಕಾರಿ ಮರಾಠಿ ಶಾಲೆ
ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕೊಠಡಿಯನ್ನು ಎರಡು ವರ್ಷದಿಂದ ಬಳಸುತ್ತಿರಲಿಲ್ಲ,ಹೀಗಾಗಿ ಅದು ಕೂಡಾ ಮಳೆಗೆ ಆಹುತಿಯಾಗಿದೆ.ಸ್ಥಳಕ್ಕೆ ಖಾನಾಪುರ ತಾಲೂಕು ಶಿಕ್ಷಣ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *