ಲೀಡರ್ ಜೊತೆ ಸೆಲ್ಫಿ ತೆಗೆಸಿಕೊಂಡ,ಪ್ರಭಾವಿ ಲೀಡರ್….!!

ಕುಡಚಿ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳಕರ ಸೆಲ್ಫೀ…..!!!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿವೆ, ಆದ್ರೆ ಕುಡಚಿ ವಿಧಾನಸಭಾ ಕ್ಷೇತ್ರ ಈಗ ಎಲ್ಲರ ಗಮನ ಸೆಖೆಯುತ್ತಿದೆ. ಯಾಕಂದ್ರೆ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಈ ಕ್ಷೇತ್ರದಲ್ಲಿ ಸೈಕಲ್ ಜಾಥಾ ನಡೆಸಿದ ಬಳಿಕ,ಶಾಸಕಿ ಲಕ್ಷ್ಮೀ ಹೆಬ್ಬಾಳಕರ,ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇದೇ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಕುಡಚಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಡೆಸಿರುವ ಸೈಕಲ್ ಜಾಥಾ, ಬಿಜೆಪಿ ಪಕ್ಷಕ್ಕಿಂತ ಹೆಚ್ಚು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ನಡುಕ ಹುಟ್ಟಿಸಿದೆ.ಈ ಸೈಕಲ್ ಜಾಥಾದಲ್ಲಿ,ಕಾಂಗ್ರೆಸ್ ನಾಯಕ ಮಹೇಶ್ ತಮ್ಮಣ್ಣವರ ಅವರ ಪ್ರಮೋಶನ್ ಆಗಿದೆ.ಆದ್ರೆ ಮಾಜಿ ಶಾಸಕ ಶ್ಯಾಮ ಘಾಟಗೆ ಮಾತ್ರ ಹೈರಾಣಾಗಿದ್ದು ಸತ್ಯ.

ಮಹೇಶ್ ತಮ್ಮಣ್ಣವ ಹೆಗಲ ಮೇಲೆ ಸೈಕಲ್ ಜಾಥಾ ಎಂಬ ಅಸ್ರ್ರ ಇಟ್ಟು,ಶ್ಯಾಮ ಘಾಟಗೆ,ಬಿಸಿ ಮುಟ್ಟಿಸುವ ಹೈ ಲೇವಲ್ ಪಾಲಿಟೀಕ್ಸ್ ಈಗ ಕುಡಚಿ ಕ್ಷೇತ್ರದಲ್ಲಿ ನಡೆಯುತ್ತಿದೆ.

ಹಾರೂಗೇರಿಯಲ್ಲಿ ನಡೆದ
ವೇದಿಕೆ ಮೇಲೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಶಾಸಕಿ ಹೆಬ್ಬಾಳಕರ ಎಲ್ಲರ ಗಮನ ಸೆಳೆದಿದ್ದಾರೆ.ರಾಜಕಾರಣಿಗಳ ಜೊತೆಗೆ ಅವರ ಅಭಿಮಾನಿಗಳ‌ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವದು ಕಾಮನ್ ಆದರೆ ರಾಜ್ಯದ ಪ್ರಭಾವಿ ರಾಜಕಾರಣಿ ಎಂದು ಗುರುತಿಸಿಕೊಳ್ಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಮಹೇಶ ತಮ್ಮಣ್ಣವರ ಅವರ ಸೈಕಲ್ ಜಾಥಾ ಸಮಾರೋಪ ಸಮಾರಂಭದಲ್ಲಿ ವೇದಿಕೆ ಮೇಲೆಯೇ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸತೀಶ ಜಾರಕಿಹೊಲೀ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.ವೇದಿಕೆ ಮೇಲೆ 5 ನಿಮಿಷಗಳ ಕಾಲ ವಿವಿಧ ಪೋಸ್ ನೀಡಿ ಸತೀಶ ಜಾರಕಿಹೊಳಿ ಅವರ ಜೊತೆ ಲಕ್ಷ್ಮೀ ಹೆಬ್ಬಾಳಕರ ಮೊಬೈಲ್ ಫೋನ ದಲ್ಲಿ ಸೆಲ್ಪೀ ಕ್ಲಿಕ್ಕಿಸಿಕೊಂಡು ಅದನ್ನ ತೋರಿಸಿ ಸಂತಸ ಪಟ್ಟರು.

ಕುಡಚಿ ವಿಧಾನಸಭಾ ಕೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಹಾರೂಗೇರಿಯಲ್ಲಿ ಬೃಹತ್ ಸೈಕಲ್ ಜಾಥಾದ ಸಮಾರೋಪ ಸಮಾವೇಶ ಆಯೋಜನೆ ಮಾಡಲಾಗಿತ್ತು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *