Breaking News

ಕಾಲೇಜು ವಿಧ್ಯಾರ್ಥಿಗಳ ನಡುವೆ ಗಲಾಟೆ ಓರ್ವನಿಗೆ ಗಾಯ….

ಬೆಳಗಾವಿ-ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು ಓರ್ವ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಕಾಲೇಜು ರಸ್ತೆಯ ಬಸ್ ನಿಲ್ದಾಣ ಬಳಿ ಈ ಗಲಾಟೆ ನಡೆದಿದೆ. ಬಸ್ ನಿಲ್ದಾಣ ಬಳಿಯೇ ವಿದ್ಯಾರ್ಥಿಗಳ ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿದ್ದರಿಂದ ಕೆಲ ಕಾಲ ಇಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕ್ಯಾಂಪ್ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಉದ್ರೇಕಗೊಂಡಿದ್ದ ವಿಧ್ಯಾರ್ಥಿಗಳನ್ನು ಶಾಂತಗೊಳಿಸಿದ್ದಾರೆ.

ಇಂದು ಸಂಜೆ ಹೊತ್ತಿಗೆ ನಡೆದ ಗಲಾಟೆಯಲ್ಲಿ, ಶ್ರೀಹರಿ ಎಂಬ ವಿದ್ಯಾರ್ಥಿ ಗಾಯ,ಗೊಂಡಿದ್ದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *