ಭಯಾನಕ ಆಕ್ಸಿಡೆಂಟ್, ಬಾಲಕನ ಸಾವು,ಲಾರಿ ಮೇಲೆ ಕಲ್ಲು ತೂರಾಟ…

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ನಡುವೆಯೂ ಭಾರಿ ವಾಹನಗಳ,ಮರಣ ಮೃದಂಗ ಮುಂದುವರೆದಿದೆ.

ಇಂದು ಬುಧವಾರ ಬೆಳಗ್ಗೆ ಬೆಳಗಾವಿ ನಗರದ ಕ್ಯಾಂಪ್ ಪ್ರದಶದಲ್ಲಿ ಲಾರಿ ಹಾಯ್ದು,ರಸ್ತೆ ದಾಡುತ್ತಿದ್ದ ಹತ್ತು ವರ್ಷದ ಬಾಲಕ ಬಲಿಯಾಗಿದ್ದು,ಸ್ಕೂಟಿ ಮೇಲೆ ಹೋಗುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಹತ್ತು ವರ್ಷದ ಬಾಲಕ ಅರಹಾನ್ ಬೇಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು,ಅತೀಕಾ,ಮತ್ತು ಆಯುಷ್ಯ ಎಂಬುವವರು ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಬಳಿಕ,ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ,ಸೇರಿದ್ರು,ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ್ರು,ಲಾರಿ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ರು,ದೊಣ್ಣೆ ಯಿಂದ ಲಾರಿಯ ಗಾಜುಗಳನ್ನು ಪುಡಿ ಪುಡಿ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ರು.ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *