ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಬೆಳಗಾವಿಯ ಬಾಲಕ

ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಬೆಳಗಾವಿಯ ಬಾಲಕ

ಬೆಳಗಾವಿ- ಬಟ್ಟೆ ತೊಳೆಯಲು ಪಾಲಕರ ಜೊತೆ ಹೋದ ಬಾಲಕ ನೀರಿನ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ಹಲಗಾ ಬಳಿ ನಡೆದಿದೆ

ಹಲಗಾ ಬಳಿ ಇರುವ ಆರ್ ಎನ್ ಶೆಟ್ಡಿ ಕ್ವಾರಿಯ ಹೊಂಡದಲ್ಲಿ ಈಜಲು ಹೋದ ಬೆಳಗಾವಿ ನಗರದ ಟಿಳಕ ಚೌಕದ ನಿವಾಸಿಯಾಗಿದ್ದ 13ವರ್ಷದ ಬಸಯ್ಯ ಶಿವಾನಂದ ಮಠದ ಮೃತ ದುರ್ದೈವಿಯಾಗಿದ್ದಾನೆ.

ಇಂದು ಮದ್ಯಾಹ್ನ ಈ ದುರ್ಘಟನೆ ನಡೆದಿದ್ದು ಪ್ರಕೃತಿ ವಿಕೋಪ ರಕ್ಷಣಾ ತಂಡದವರು ಸುಧೀರ್ಘ ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ.

ಆರ್ ಎನ್ ಶೆಟ್ಟಿ ಹೊಂಡದಲ್ಲಿ ಈಜಲು ಹೋಗಿ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *