Breaking News

ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಬೆಳಗಾವಿಯ ಬಾಲಕ

ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಬೆಳಗಾವಿಯ ಬಾಲಕ

ಬೆಳಗಾವಿ- ಬಟ್ಟೆ ತೊಳೆಯಲು ಪಾಲಕರ ಜೊತೆ ಹೋದ ಬಾಲಕ ನೀರಿನ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ಹಲಗಾ ಬಳಿ ನಡೆದಿದೆ

ಹಲಗಾ ಬಳಿ ಇರುವ ಆರ್ ಎನ್ ಶೆಟ್ಡಿ ಕ್ವಾರಿಯ ಹೊಂಡದಲ್ಲಿ ಈಜಲು ಹೋದ ಬೆಳಗಾವಿ ನಗರದ ಟಿಳಕ ಚೌಕದ ನಿವಾಸಿಯಾಗಿದ್ದ 13ವರ್ಷದ ಬಸಯ್ಯ ಶಿವಾನಂದ ಮಠದ ಮೃತ ದುರ್ದೈವಿಯಾಗಿದ್ದಾನೆ.

ಇಂದು ಮದ್ಯಾಹ್ನ ಈ ದುರ್ಘಟನೆ ನಡೆದಿದ್ದು ಪ್ರಕೃತಿ ವಿಕೋಪ ರಕ್ಷಣಾ ತಂಡದವರು ಸುಧೀರ್ಘ ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ.

ಆರ್ ಎನ್ ಶೆಟ್ಟಿ ಹೊಂಡದಲ್ಲಿ ಈಜಲು ಹೋಗಿ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *