Breaking News

ಎರಡು ಆನೆಗಳೊಂದಿಗೆ ಬೆಳಗಾವಿ ತಲುಪಿದ ಸಕ್ರೆಬೈಲ್ ಟೀಂ…

ಚಿರತೆ ಪತ್ತೆ ಕಾರ್ಯಾಚರಣೆಗಾಗಿ ಶಿವಮೊಗ್ಗದ ಸಕ್ರೆಬೈಲ ನಿಂದ ಎರಡು ಆನೆಗಳ ಜೊತೆ  ಎಕ್ಸಪರ್ಟ್ ಟೀಂ ಮದ್ಯರಾತ್ರಿ ಎರಡು ಗಂಟೆಗೆ ಬೆಳಗಾವಿ ತಲುಪಿದೆ..ಆನೆಗಳು ರೆಸ್ಟ್ ಮಾಡುತ್ತಿದ್ದು ಇನ್ನೇನು ಕಾರ್ಯಾಚರಣೆ ಶುರುವಾಗಲಿದೆ

ಬೆಳಗಾವಿ: ಇಲ್ಲಿಯ ಗಾಲ್ಫ್ ಮೈದಾನದಲ್ಲಿ 20 ದಿನಗಳಿಂದ ಅರಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬುಧವಾರ ಬೆಳಗ್ಗೆ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.

ಅರಣ್ಯ ಸಚಿವರ ಕ್ಷೇತ್ರದಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆ‌ಗಳು ಗಾಲ್ಫ್ ಕೋರ್ಸ್ ನ ಪೊದೆಯೊಳಗೆ‌ ನುಗ್ಗಿವೆ.

ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ ನೇತೃತ್ವದಲ್ಲಿ ಈ ಸ್ಪೇಷಲ್ ಟೀಂ ಬಂದಿವೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಹಾಯಕ ಸಿಬ್ಬಂದಿ ಸೇರಿದಂತೆ 8 ಜನರ ತಂಡ ಆಗಮಿಸಿದೆ.

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *