Breaking News

ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

ರಾಮದುರ್ಗ-ಹೊಸೂರ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸೂರ ಗ್ರಾಮದಲ್ಲಿ ವ್ಯಕ್ತಿಯೊಬ್ವನನ್ನು ಹತ್ಯೆ ಮಾಡಲಾಗಿದೆ‌.

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ದುಷ್ಕರ್ಮಿಗಳು,ಕೊಲೆ ಮಾಡಿ ಅಪಘಾತ ಎಂಬ ರೀತಿ ಬಿಂಬಿಸಲು ಯತ್ನಿಸಿದ ಶಂಕೆ ವ್ಯಕ್ತವಾಗಿದೆ.ಮೃತದೇಹದ ಪಕ್ಕವೇ ಬೈಕ್ ಬಿದ್ದಿದೆ.ಬೇರೆಡೆ ಬರ್ಬರ ಹತ್ಯೆಗೈದು ಶವ ಬಿಸಾಕಿ ಹೋದ ಶಂಕೆ ವ್ಯಕ್ತವಾಗಿದೆ.

ಹೊಸೂರ ಗ್ರಾಮದ 35 ವರ್ಷದ ಪಾಂಡಪ್ಪ ದುಂಡಪ್ಪ ಜಟಕನ್ನವರ ಮೃತದೇಹ ಪತ್ತೆಯಾಗಿದೆ.ಹೊಸೂರ ಫೂಲ್ ಬಳಿ ಶವ ಬಿಸಾಕಿ ಹೋಗಿರುವ ದುಷ್ಕರ್ಮಿಗಳು ಪತ್ತೆಗೆ ಪೋಲೀಸರು ಜಾಲ ಬೀಸಿದ್ದಾರೆ.ಹೊಸೂರ ಗ್ರಾಮದ ಫುಲ್ ಬಳಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹ ನೋಡಿ ಜನ ಬೆಚ್ಚಿಬಿದ್ದಿದ್ದಾರೆ.ಕಟಕೋಳ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಹೊಸೂರ ಗ್ರಾಮಸ್ಥರು,ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದುಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ‌

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *