Breaking News
Home / Breaking News / ಬೆಳಗಾವಿಯಲ್ಲಿ ಖತರ್ನಾಕ್ ಆ್ಯಕ್ಸಿಡೆಂಟ್ ನಾಲ್ವರು ಸಾವು….

ಬೆಳಗಾವಿಯಲ್ಲಿ ಖತರ್ನಾಕ್ ಆ್ಯಕ್ಸಿಡೆಂಟ್ ನಾಲ್ವರು ಸಾವು….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಬವಿಸಿದೆ, ಲಾರಿ ಕಾರಿಗೆ ಡಿಕ್ಕಿ ಹೊಡೆದು ಕಾರು,ಬೈಕ್ ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿ,ಈ ಅಪಘಾತದಲ್ಲಿ ಒಟ್ಟು ನಾಲ್ಕು ಜನರು ಸಾವನ್ನೊಪ್ಪಿದ್ದಾರೆ‌‌.

ಸವದತ್ತಿ ತಾಲ್ಲೂಕಿನ ಭೂದಿಗೊಪ್ಪ ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಮೂರು ಜನ ಸದಥಳದಲ್ಲೇ ಮೃತಪಟ್ಟಿದ್ದು ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬೂದಿಗೊಪ್ಪ ಕ್ರಾಸ್ ಬಳಿ ಸರಣಿ ಅಪಘಾತದಲ್ಲಿ,ಸ್ವಿಫ್ಟ್ ಡಿಸೈರ್ ಕಾರು ಚಾಲಕ ನಿಖಿಲ್ ಕದಂ (24), ಎಎಸ್ಐ ಪತ್ನಿ ರುಕ್ಮಿಣಿ ಹಲಕಿ (48) ಪುತ್ರಿ ಅಕ್ಷತಾ ಹಲಕಿ (22) ಸ್ಥಳದಲ್ಲೇ ಸಾವನ್ನೊಪ್ಪಿದ್ದು,ಬೈಕ್‌ನಲ್ಲಿ ತೆರಳುತ್ತಿದ್ದ ಹನುಮವ್ವ ಚಿಪ್ಪಲಕಟ್ಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಯರಗಟ್ಟಿ ಕಡೆಗೆ ಹೊರಟಿದ್ದ ಕಾರು,ಬೆಳಗಾವಿ ಕಡೆಗೆ ಬರುತ್ತಿದ್ದ ಸಿಮೆಂಟ್ ಲಾರಿ ಮದ್ಯೆ ಅಪಘಾತ ಸಂಭವಿಸಿದ್ದು ಬಾಚಿ- ರಾಯಚೂರು ರಾಷ್ಟ್ರೀಯ ಹೆದ್ದಾರಿಯಲ್ಲಿ.

ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಅಪಘಾತದಲ್ಲಿ ಜಿಬ್ಬಿಯಾಗಿದ್ದ ಕಾರನ್ನು ಜೆಸಿಬಿ ಮೂಲಕ ತೆರವು ಮಾಡಿದ್ದಾರೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *