ಹದಿನೈದು ತೊಲೆ ಬಂಗಾರ,ಎರಡು ಲಕ್ಷ ರೂ ಸ್ವಾಹಾ…!!!

ಸವದತ್ತಿ-ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ,ಬೆಳಗಾವಿ ಜಿಲ್ಲೆ ಸವದತ್ತಿಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ.

ಮನೆಯಲ್ಲಿ ‌ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ.ಬಾಬು ಮಹಾದೇವಪ್ಪ ಪಾಸಲಕರ್ ಎಂಬುವವರ ಮನೆ ಕಳುವಾಗುದೆ.150 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚಲಾಗಿದೆ.

ಕುಟುಂಬ ಸದಸ್ಯರ ಜೊತೆಗೆ ಸಂಬಂಧಿಕರ ಮನೆಗೆ ಹೋಗಿದ್ದ ಬಾಬು ಪಾಸಲಕರ ಅವರ ಮನೆಗೆ ನುಗ್ಗಿ
ತಡರಾತ್ರಿ ಚಿನ್ನ, ಹಣ ದೋಚಿ ಪರಾರಿಯಾಗಿದ್ದಾರೆ.ಮನೆಗಳ್ಳತನದಿಂದ ಬೆಚ್ಚಿಬಿದ್ದ ಶಾಂತಿನಗರ ಬಡಾವಣೆ ನಿವಾಸಿಗಳು.ಸವದತ್ತಿ ಠಾಣೆಗೆ ದೂರು ನೀಡಿದ್ದಾರೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *