ಬೆಳಗಾವಿಗೆ ನಿಜಾಮುದ್ದೀನ್ ನಂಟು,ಜಿಲ್ಲಾ ಆಸ್ಪತ್ರೆಯಲ್ಲಿ 62 ಜನರ ತಪಾಸಣೆ…

ಮರ್ಕಜ್ ಧಾರ್ಮಿಕ ಸಭೆ: ಜಿಲ್ಲೆಯ ೬೨ ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ, ಏ.೧(ಕರ್ನಾಟಕ ವಾರ್ತೆ): ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿಬಂದಿರುವ ಬೆಳಗಾವಿ ಜಿಲ್ಲೆಯ ೬೨ ಜನರ ಮಾಹಿತಿ ಲಭಿಸಿದೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

೬೨ ಜನರ ಪೈಕಿ ಡಯಾಬಿಟಿಸ್, ಅಸ್ಥಮಾ, ಹೈಪರ್ ಟೆನ್ಷನ್ ಹೊಂದಿರುವ ಐವತ್ತಕ್ಕೂ ಅಧಿಕ ವಯೋಮಾನದ ೨೭ ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ.
ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
***

Check Also

ರೇಖಾ ಗುಪ್ತಾ ದೆಹಲಿ ಸಿಎಂ ಇಂದು ಪ್ರಮಾಣ ವಚನ

ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ …

Leave a Reply

Your email address will not be published. Required fields are marked *