Breaking News

ನಾಳೆ ಶನಿವಾರ ಬೆಳಗಾವಿಗೆ ಟಿ.ಎ ನಾರಾಯಣಗೌಡ್ರು….

ಬೆಳಗಾವಿ-ಹಿರಿಯ ಕನ್ನಡಪರ ಹೋರಾಟಗಾರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ,ಕನ್ನಡ ನೆಲ,ಜಲ,ಭಾಷೆಯ ರಕ್ಷಕ ಟಿ.ಎ ನಾರಾಯಣಗೌಡ್ರು ನಾಳೆ ಶನಿವಾರ ಬೆಳಗಾವಿಗೆ ಬರಲಿದ್ದಾರೆ.

ಬೆಳಗ್ಗೆ ಬೆಳಗಾವಿಗೆ ಆಗಮಿಸುವ ಅವರು ನಗರದಲ್ಲಿ ಕರವೇ ಪದಾಧಿಕಾರಿಗಳ ಜೊತೆ ಸಭೆ ನಡೆಸಿ, ಈ ತಿಂಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಅಂತಿಮ ಹಂತದ ವಿಚಾರಣೆ ನಡೆಯಲಿದ್ದು,ಇಂತಹ ಮಹತ್ವದ ಸಂಧರ್ಭದಲ್ಲಿ ಕರ್ನಾಟಕ ಸರ್ಕಾರ ಕೈಗೊಳ್ಳಬೇಕಾದ ಮುಂಜಾಗೃತೆ,ಸರ್ಕಾರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರುವ ನಿರ್ಧಾರ ಕೈಗೊಳ್ಳಲಿದ್ದಾರೆ.

ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬೆಳಗಾವಿಯ ಕರವೇ ಪದಾಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಸಂಜೆ ಸಂಕೇಶ್ವರದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಸಂಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿ ರಾತ್ರಿ ಬೆಂಗಳೂರಿಗೆ ಹೊರಡಲಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *