ಸಿಎಂ ಜೊತೆ ರಮೇಶ್ ಜಾರಕಿಹೊಳಿ,ಈಶ್ವರಪ್ಪ ಮೀಟೀಂಗ್..!!

ಬೆಳಗಾವಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.
ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ವರಿಷ್ಠರು ಹಸಿರು ನಿಶಾನೆ ತೋರಿದರೆ ಸಚಿವ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು ಎನ್ನಲಾಗಿದೆ.

ಸಂಪುಟ ವಿಸ್ತರಣೆಯಾದರೆ ಘಟಾನುಘಟಿಗಳಾದ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸಂಪುಟ ಸೇರ್ತಾರೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿಗಳು ಇವರಿಬ್ಬರ ಜೊತೆ ಸುದೀರ್ಘ ಹೊತ್ತು ಅತ್ಯಂತ ಕುಶಲೋಪಕಾರಿಯಾಗಿ ಮಾತುಕತೆ ನಡೆಸಿದರು. ಒಟ್ಟಾರೆ ಬೊಮ್ಮಾಯಿ ಜೊತೆಗಿನ ಮಾತುಕತೆ ಸಕಾರಾತ್ಮಕವಾಗಿ ನಡೆದಿದೆ ಎನ್ನಲಾಗಿದೆ.ಸಚಿವ ಸಂಪುಟದ ವಿಸ್ತರಣೆ ಯಾವಾಗ? ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *