ಪ್ಲಾಸ್ಟೀಕ್ ಚೀಲ, ನೀರಿನ ಬಾಟಲ್, ಎಲೆಕ್ಟ್ರಾನಿಕ್ ವಸ್ತು ತರಲು ನಿರ್ಬಂಧ!

ಬೆಳಗಾವಿ, ಫೆ.25(ಕರ್ನಾಟಕ ವಾರ್ತೆ): ನಗರದಲ್ಲಿ ಇದೇ ಫೆ.27 ರಂದು ನಡೆಯಲಿರುವ ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಕೈಚೀಲಗಳು(ಬ್ಯಾಗ್), ನೀರಿನ ಬಾಟಲ್ ಹಾಗೂ ಯಾವುದೇ ತರಹದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳನ್ನು ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ.
ಬಸ್ ಮತ್ತಿತರ ವಾಹನಗಳಲ್ಲಿ ಆಗಮಿಸುವ ಫಲಾನುಭವಿಗಳು ಹಾಗೂ ಸಾರ್ವಜನಿಕರು ತಮ್ಮ ಬ್ಯಾಗ್ ಗಳು, ನೀರಿನ ಬಾಟಲ್ ಮತ್ತು ಮೊಬೈಲ್ ಹೊರತುಪಡಿಸಿ ಯಾವುದೇ ತರಹದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳನ್ನು ಬಸ್ ಅಥವಾ ತಮ್ಮ ವಾಹನಗಳಲ್ಲಿಯೇ ಇಟ್ಟು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಬಹುದು.
ಮೊಬೈಲ್ ಫೋನ್ ಗಳನ್ನು ತರಲು ಅವಕಾಶವಿರುತ್ತದೆ. ಭದ್ರತೆ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
***

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *