ರಮೇಶ್ ಜಾರಕಿಹೊಳಿ, ಗುರಿ ಇಟ್ಟರೆ ಗೆಲುವು ಖಚಿತ- ಸಿಎಂ ಬೊಮ್ಮಾಯಿ ವಿಶ್ವಾಸ.

*ಅಭಿವೃದ್ಧಿ ಪರ ಬೆಳಗಾವಿ ಜಿಲ್ಲೆಯಲ್ಲಿ ಜಾತಿ-ಹಣದ ರಾಜಕಾರಣ ನಡೆಯುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

ಬೆಳಗಾವಿ: ಬೆಳಗಾವಿ ಜಿಲ್ಲೆ ಅಭಿವೃದ್ಧಿ ಪರ ಜಿಲ್ಲೆ. ಇಲ್ಲಿ ಜಾತಿ ರಾಜಕಾರಣ, ಹಣದ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ ಪರ ರೋಡ್ ಶೋ ನಡೆಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೆಳಗಾವಿ ಇದು ಗಂಡು ಮೆಟ್ಟಿದ ನಾಡು. ಚೆನ್ನಮ್ಮ, ರಾಯಣ್ಣನ ನಾಡು. ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡು ಚುನಾವಣೆ ಮುಗಿಯುವವರೆಗೂ ಮಾತ್ರ ಆಮೇಲೆ ಗಳಗಂಟಿ ಆಗುತ್ತದೆ. ಎಂದರು‌.

ರಮೇಶ್ ಜಾರಕಿಹೊಳಿ ಯಾವುದೇ ಅಧಿಕಾರದ ಆಸೆ ಇಟ್ಟುಕೊಂಡು ರಾಜಕಾರಣ ಮಾಡಿಲ್ಲ. ಅವರು ಗುರಿ ಇಟ್ಟರೆ ಗೆಲುವು ಖಚಿತ. ರಮೇಶ ಜಾರಕಿಹೊಳಿ ಜನರ ಪ್ರಿತಿ ವಿಶ್ವಾಸ ಗಳಿಸಿ ನಾಯಕರಾಗಿದ್ದಾರೆ. ಅವರು ಅಧಿಕಾರದ ನಾಯಕರಾಗಿಲ್ಲ.
ಅವರು ನಾಗೇಶ್ ಮನೊಳ್ಕರ್ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಗೋಕಾಕ್ ಕ್ಷೇತ್ರ ಬಿಟ್ಟು ಇಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದರು.

ನಮ್ಮ ಸರ್ಕಾರ ಐದು ವರ್ಷದಲ್ಲಿ ಕೇವಲ ಮೂರು ವರ್ಷ ಅಧಿಕಾರ ನಡೆಸಿದೆ. ಒಂದು ವರ್ಷ ಸಮ್ಮಿಶ್ರ ಸರ್ಕಾರ ಒಂದು ವರ್ಷ ಕೋವಿಡ್ ನಲ್ಲಿ ಕಾಲ ಹರಣವಾಯಿತು.
ಪ್ರವಾಹ ಬಂದಾಗ ನಾವು ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಂದು ತಿಂಗಳಲ್ಲಿ ಎರಡೂವರೆ ಸಾವಿರ ಕೋಟಿ ರೂ.‌ ಪರಿಹಾರ ನೀಡಿದ್ದೇವೆ.
ಕಳೆದ ನಾಲ್ಕು ವರ್ಷದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 54 ಲಕ್ಷ ರೈತರಿಗೆ 16 ಸಾವಿರ ಕೋಟಿ ರೂ.ಅನುದಾನ ನೀಡಿದ್ದೇವೆ ಎಂದರು.

ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದೇನೆ. ರೈತರು ಯಾರ ಹೆಸರು ಹೇಳುತ್ತಾರೆ. ಬಿಜೆಪಿ ಹೆಸರು ಹೇಳುತ್ತಾರೆ. ರೈತರ ಪರವಾಗಿ ನಮ್ಮ ಸರ್ಕಾರ. ವಿದ್ಯಾರ್ಥಿಗಳ ಪರವಾಗಿ ನಮ್ಮ ಸರ್ಕಾರ.
ಸಾಮಾಜಿಕ ನ್ಯಾಯ ಅಂತ‌ ಹೇಳಿ ಕಾಂಗ್ರೆಸ್ ನವರು ಮಾತ್ರ ಮುಂದೆ ಹೋದರು. ದೀನ ದಲಿತರನ್ನು ಅಲ್ಲಿಯೇ ಇಟ್ಟಿದ್ದೀರಿ. ಈ ಬಾರಿ ಬಿಜೆಪಿ ಸರ್ಕಾರ ಇದೆ. ಸಿದ್ದರಾಮಯ್ಯ ಒಳಮೀಸಲಾತಿ ವಿಷಯ ಬಂದಾಗ ಮಾತನಾಡದೇ ಓಡಿ ಹೋದರು. ಆದರೆ, ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನಾನು‌ ಜೇನು ಗೂಡಿಗೆ ಕೈ ಹಾಕಿ ಅವರಿಗೆ ಜೇನು ತುಪ್ಪ ನೀಡಿದ್ದೇನೆ ಎಂದರು.

ಸುರ್ಜೇವಾಲ ಅಂತ ಒಬ್ಬ ವ್ಯಕ್ತಿ ಇದ್ದಾನೆ. ಅವರು ಬೊಮ್ಮಾಯಿ ಲಿಂಗಾಯತರಲ್ಲ ಅಂತ ಹೇಳಿದ್ದಾರೆ. ನಾನು ಒಬ್ಬ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸುವ ಕೆಲಸ ಮಾಡಿದ್ದೇನೆ ಎಂದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *