ಇಂದು,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸ್ನೇಹ ಭೋಜನ ಕೂಟ…!!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಗ್ರಾಮ ಪಂಚಾಯತಿ ಚುನಾವಣೆ ಯಲ್ಕಿ ಆಯ್ಕೆಯಾಗಿರುವ ನೂತನ ಸದಸ್ಯರಿಗೆ ಸತ್ಕಾರ ಮತ್ತು ಸ್ನೇಹ ಭೋಜನ ಕೂಟವನ್ನು ಏರ್ಪಡಿಸಲಾಗಿದೆ…

ಬಿಜೆಪಿಯ ಯುವ ಮುಖಂಡ ಧನಂಜಯ ಜಾಧವ ಇಂತಹದೊಂದು ಭೋಜನಕೂಟವನ್ನು ಆಯೋಜಿಸಿದ್ದು,ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಭಾಗವಹಿಸುತ್ತಿರುವದು ವಿಶೇಷ…

ಈ ಸ್ನೇಹ ಭೋಜನ ಕೂಟ ಮತ್ತು ಗ್ರಾಮ ಪಂಚಾಯತಿ ನೂತನ ಸದಸ್ಯರ ಸತ್ಕಾರ ಸಮಾರಂಭ ,ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕೀಯ ಭವಿಷ್ಯ ರೂಪಿಸಲು ಎನ್ನುವದು ಸತ್ಯ…

ಇಂದು ನಡೆಯುವ ಸ್ನೇಹ ಭೋಜನ ಕೂಟ ಮತ್ತು ಸತ್ಕಾರ ಸಮಾರಂಭಕ್ಕೆ,ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಶ್ಚಿಮ ಭಾಗದಲ್ಲಿರುವ ಮರಾಠಾ ಸಮುದಾಯದ ನಾಯಕರನ್ನು ಆಕರ್ಷಿಸುವದಕ್ಕಾಗಿ ಈ ಭಾಗದಲ್ಲಿ ಬಿಜೆಪಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಭೋಜನಕೂಟದ ಜೊತೆ ಸತ್ಕಾರ ಸಮಾರಂಭ ಆಯೋಜಿಸಲಾಗಿದೆ…

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದಾರೆ ಎಂದು ಈ ಭಾಗದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಪ್ರತಿಪಾದಿಸಿದ್ದು,ಬಿಜೆಪಿಯೂ ಈ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ,ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಭಾಗವಹಿಸುತ್ತಿರುವದರಿಂದ ಈ ಕಾರ್ಯಕ್ರಮ ಎಲ್ಲರನ್ನು ಆಕರ್ಷಿಸಿದೆ…

ಬೆಳಗಾವಿಯ ಜಾಂಬೋಟಿ ರಸ್ತೆಯಲ್ಲಿರುವ ಗಣೇಶ್ ಭಾಗ್ ನಲ್ಲಿ ಇಂದು ಮದ್ಯಾಹ್ನ ಈ ಭೋಜನ ಕೂಟ ನಡೆಯಲಿದ್ದು,ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಶ್ಚಿಮ ಭಾಗದ ಸದಸ್ಯರು ಭಾಗವಹಿಸುವ ಮೂಲಕ ಬಿಜೆಪಿಯ ಬಲಪ್ರದರ್ಶನ ಮಾಡಲಿದ್ದಾರೆ…

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *