Breaking News
Home / Breaking News / ಶಿವಾನಂದ ವಾಲಿ,ಮಾಟ ಮಾಡಿ ,5 ರಿಂದ 6 ಕೋಟಿ ಕೆ.ಕಲ್ಯಾಣ ಆಸ್ತಿ ಕಬಳಿಕೆ.

ಶಿವಾನಂದ ವಾಲಿ,ಮಾಟ ಮಾಡಿ ,5 ರಿಂದ 6 ಕೋಟಿ ಕೆ.ಕಲ್ಯಾಣ ಆಸ್ತಿ ಕಬಳಿಕೆ.

ಬೆಳಗಾವಿ-ಶಿವಾನಂದ ವಾಲಿ,ಮಾಟ ಮಾಡಿ ,5 ರಿಂದ 6 ಕೋಟಿ ಕೆ.ಕಲ್ಯಾಣ ಆಸ್ತಿ ಕಬಳಿಕೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು

ಕಾನೂನು ಸುವ್ಯವಸ್ಥೆಯ ಡಿಸಿಪಿ ಡಾ.ವಿಕ್ರಮ್ ಆಮಟೆ ತಿಳಿಸಿದ್ದಾರೆ.

ಸೋಮವಾರ ಮಾಳಮಾರುತಿ ಠಾಣೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರೇಮಕವಿ, ಸಾಹಿತಿ ಕೆ.ಕಲ್ಯಾಣ ದಾಂಪತ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆಯಲ್ಲಿ ಚಿಟಿಂಗ್ ಮತ್ತು ಅಪಹರಣ ದೂರು ದಾಖಲಿಸಿದ ಪರಿಣಾಮ ಗಡ್ಡೇಕರ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಿ ಕಲ್ಯಾಣ ಅವರ ಪತ್ನಿ ಹಾಗೂ ಅವರ ಕುಟುಂಬದವರನ್ನು ರಕ್ಷಿಸಿದ್ದಾರೆ.
ಶಿವಾನಂದ ವಾಲಿ ಅವರನ್ನು ವಶಕ್ಕೆ ಪಡೆದು ಕೆ. ಕಲ್ಯಾಣ ಅವರ ಕುಟುಂಬಕ್ಕೆ ವಂಚಿಸಿದ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬಾಯಿ ಬಿಟ್ಟಿದ್ದಾರೆ. ಅವರ ಹೇಳಿಕೆಯ ಮೇಲೆ ಮಾಳಮಾರುತಿ ಠಾಣೆಯ ಸಿಪಿಐ ನೇತೃತ್ವದಲ್ಲಿ 9 ಮ್ಯಾಕ್ಸಿಕ್ಯಾಬ್, 350 ಗ್ರಾಂ ಚಿನ್ನ,6 ಕೆ.ಜಿ. ಬೆಳ್ಳಿ, ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಬೆಳಗಾವಿ ನಗರ ಸೇರಿದಂತೆ ಐದರಿಂದ ಆರು ಕೋಟಿ ರು. ಆಸ್ತಿ ಶಿವಾನಂದ ವಾಲಿ ಅವರ ಹೆಸರಿಗೆ ಬರೆಸಿಕೊಂಡಿದ್ದಾರೆ ಎಂದು ಅವರು ಹೇಳಿದುರು.

ಗಂಗಾ ಕುಲಕರ್ಣಿ ಅವರನ್ನು ಮನೆಗೆ ಕಳುಹಿಸಿ ಅವರ ಪತಿಯಿಂದಲೇ ಅವರ ಪತ್ನಿಗೆ ಕಂಟಕ ಇದೆ ಎಂದು ಪೂಜೆ ಮಾಡಿಸುವುದಾಗಿ ಲಕ್ಷಾಂತರ ರು. ಹಣ ವಾಲಿ ಅವರ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಲ್ಲದೆ ವಾಲಿ ಅವರ ಮೈ ಮೇಲೆ ದೇವರು ಬರುತ್ತದೆ ಎಂದು ಅವರ ಆಸ್ತಿ ಲಪಟಾಯಿಸಿದ್ದಾರೆ. ಇನ್ನೂ ತನಿಖೆ ಹಂತದಲ್ಲಿದ್ದು ಇನ್ನೆಷ್ಟು ಆಸ್ತಿ ಎಲ್ಲಿ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದರು.

ಸಾರ್ವಜನಿಕರು ಇಂಥ ಮಾಟ ಮಂತ್ರ ಎಂದು ಅನುಮಾನ ಬಂದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಿದರು.

ಮಾಳಮಾರುತಿ ಸಿಪಿಐ ಬಿ.ಆರ್.ಗಡ್ಡೇಕರ್ ಉಪಸ್ಥಿತರಿದ್ದರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *